ಚಾಮರಾಜನಗರ(Chamarajanagara): ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಬುಧವಾರ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೇಡ ಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುಸ್ವಾಮಿ ನೇತೃತ್ವದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ ಮೂಲಕ ಬೆಳಗ್ಗೆ 9.15ಕ್ಕೆ ಮಹಾರಥೋತ್ಸವಕ್ಕೆ ಚಾಲನೆ ಸಿಕ್ಕಿತು.
ನೂರಾರು ಭಕ್ತರು ಉಘೇ ಮಾದಪ್ಪ ಎಂಬ ಘೋಷಣೆಯೊಂದಿಗೆ ರಥವನ್ನು ಎಳೆದರು. ದೇವಾಲಯ ಆವರಣ ಸೇರಿದಂತೆ ಸುತ್ತಮುತ್ತ ನೆರೆದಿದ್ದ ಸಾವಿರಾರು ಭಕ್ತರು ಮೊಳಗಿಸಿದ ‘ಉಘೇ ಮಾದಪ್ಪ, ಉಘೇ ಮಾಯ್ಕಾರ.. ಉಘೇ ಉಘೇ..’ ಎಂಬ ಉದ್ಗಾರ ಬೆಟ್ಟದಾದ್ಯಂತ ಅನುರಣಿಸಿತು.
ಹೂವು, ಬಾಳೆ ಕಂದು, ಬಣ್ಣ ಬಣ್ಣಗಳ ವಸ್ತ್ರಗಳಿಂದ ಅಲಂಕೃತಗೊಂಡಿದ್ದ ರಥವು ದೇವಾಲಯದ ಸುತ್ತ ಒಂದು ಸುತ್ತು ಸಾಗಿತು. ರಥ ಸಾಗಿದ ಬಳಿಕ ಪಲ್ಲಕ್ಕಿ ಉತ್ಸವ ಜರುಗಿತು.
ನವ ವಧುವರರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ರಥಕ್ಕೆ ಹಣ್ಣು ಜವನ, ಧವಸ ಧಾನ್ಯ, ನಾಣ್ಯಗಳನ್ನು ಎಸೆದು ಹರಕೆ ತೀರಿಸಿದರು.
ರಥ ಸಾಗುವ ಹಾದಿಯಲ್ಲಿ ವಾದ್ಯ ಮೇಳ, ಛತ್ರಿ ಚಾಮರಗಳು, ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಸಾಗಿ ಉತ್ಸವದ ಮೆರುಗು ಹೆಚ್ಚಿಸಿದವು.
ರಥ ಎಳೆದ ಅಧಿಕಾರಿಗಳು: ರಥೋತ್ಸವಕ್ಕ ಚಾಲನೆ ದೊರೆಯುತ್ತಿದ್ದಂತೆ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಕಾರ್ಯದರ್ಶಿ ಎಸ್.ಕಾತ್ಯಾಯಿನಿದೇವಿ, ಉಪ ಕಾರ್ಯದರ್ಶಿ ಬಸವರಾಜಪ್ಪ, ಲೆಕ್ಕ ಅಧೀಕ್ಷಕ ಪ್ರವೀಣ್ ಪಾಟೀಲ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡ ರಥ ಎಳೆದರು.
ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರಿಂದ ಯಾವುದೇ ಗೊಂದಲ ಉಂಟಾಗಲಿಲ್ಲ.ರಥೋತ್ಸವದೊಂದಿಗೆ ಐದು ದಿನಗಳ ದೀಪಾವಳಿ ಜಾತ್ರೆಗೆ ತೆರೆ ಬಿದ್ದಿದೆ.
ರಥೋತ್ಸವದ ಬಳಿಕ ಭಕ್ತರು ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು. ಕೆಲವರು ವಿಶೇಷ ಟಿಕೆಟ್ ಖರೀದಿಸಿ ದರ್ಶನ ಪಡೆದರೆ, ಹಲವರು ಸರತಿ ಸಾಲಿನಲ್ಲಿ ಸಾಗಿ ಮಾದಪ್ಪನ ದರ್ಶನ ಪಡೆದರು. ದಾಸೋಹ, ಲಾಡು ಪ್ರಸಾದವನ್ನು ಸ್ವೀಕರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.