ಕ್ಯಾಬ್ ವಿಳಂಬದಿಂದಾಗಿ ವಿಮಾನಯಾನ ತಪ್ಪಿಸಿಕೊಂಡ ಮುಂಬೈನ ವಕೀಲೆಯೊಬ್ಬರಿಗೆ ₹ 20,000 ಪಾವತಿಸುವಂತೆ ಆನ್ಲೈನ್ ಟ್ಯಾಕ್ಸಿ ಸೇವೆ ಒದಗಿಸುವ ಉಬರ್ ಇಂಡಿಯಾಗೆ ಮಹಾರಾಷ್ಟ್ರದ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆ ಇತ್ತೀಚೆಗೆ ಸೂಚಿಸಿದೆ.
ದೂರುದಾರರಿಗೆ ನೀಡಿದ ದೋಷಪೂರಿತ ಸೇವೆಗೆ ಉಬರ್ ಹೊಣೆಗಾರ ಎಂದು ಥಾಣೆಯಲ್ಲಿರುವ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತಿಳಿಸಿದೆ. ಉಬರ್ ಚಾಲಕನ ನಿರ್ಲಕ್ಷ್ಯ ಮತ್ತು ಅಸಡ್ಡೆ ವರ್ತನೆಯಿಂದ ವಿಮಾನ ನಿಲ್ದಾಣ ತಲುಪಲು ವಿಳಂಬವಾಗಿದ್ದಕ್ಕಾಗಿ ವಕೀಲೆ ಕವಿತಾ ಶರ್ಮಾ ಅವರು ಎದುರಿಸಿದ ಮಾನಸಿಕ ಸಂಕಟವನ್ನು ಪರಿಗಣಿಸಿ, ಆಯೋಗವು ₹ 10,000 ನಷ್ಟ ಪರಿಹಾರ ಮತ್ತು ₹ 10,000 ದಾವೆ ವೆಚ್ಚ ನೀಡುವಂತೆ ಅದು ನಿರ್ದೇಶಿಸಿದೆ.
ಕವಿತಾ ಅವರು 2018 ರಲ್ಲಿ ಪ್ರಮುಖ ಸಭೆಯೊಂದರಲ್ಲಿ ಪಾಲ್ಗೊಳ್ಳಲು ಮುಂಬೈನಿಂದ ಚೆನ್ನೈಗೆ ಪ್ರಯಾಣಿಸಬೇಕಾಗಿತ್ತು. ನಗರದ ದೊಂಬಿವಿಲಿಯಲ್ಲಿರುವ ತನ್ನ ಮನೆಯಿಂದ 36 ಕಿಲೋಮೀಟರ್ ದೂರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಅವರು ಕ್ಯಾಬ್ ಒಂದನ್ನು ಬುಕ್ ಮಾಡಿದ್ದರು.
ಚಾಲಕ ಉಂಟು ಮಾಡಿದ ವಿಳಂಬದಿಂದಾಗಿ ಆಕೆ ವಿಮಾನ ಏರುವುದು ಸಾಧ್ಯವಾಗಲಿಲ್ಲ. ಕ್ಯಾಬ್ ಬುಕ್ ಮಾಡಿದ 14 ನಿಮಿಷಗಳ ಬಳಿಕ ಚಾಲಕ ಪಿಕಪ್ ಸ್ಥಳಕ್ಕೆ ಬಂದಿದ್ದ. ಜೊತೆಗೆ ಕಾರಿಗೆ ಅನಿಲ ತುಂಬಿಸಲು ತಲುಪಬೇಕಿದ್ದ ಹಾದಿಗೆ ವಿರುದ್ಧ ದಿಕ್ಕಿನಲ್ಲಿ ಸಾಗಿ ಇನ್ನಷ್ಟು ವಿಳಂಬ ಮಾಡಿದ. ಹೆಚ್ಚುವರಿ ಪಯಣದಿಂದಾಗಿ ದರ ವ್ಯತ್ಯಾಸವೂ ಆಗಿತ್ತು. ಚಾಲಕನ ಕಡೆಯಿಂದ ತಪ್ಪಾಗಿದೆ ಎಂದು ಅರಿತ ಉಬರ್ ಆಕೆ ಪಾವತಿಸಿದ್ದ ₹ 139 ಹಣವನ್ನು ಮರಳಿಸಿತ್ತು. ಆದರೆ ಆಕೆ ಆ ಮೊತ್ತಕ್ಕೆ ತೃಪ್ತರಾಗದೆ ಗ್ರಾಹಕ ವೇದಿಕೆಯ ಕದ ತಟ್ಟಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.