ಮನೆ ರಾಜಕೀಯ ನ.6ಕ್ಕೆ ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ನಿರ್ಧಾರ

ನ.6ಕ್ಕೆ ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮನ: ಅದ್ದೂರಿ ಸ್ವಾಗತಕ್ಕೆ ನಿರ್ಧಾರ

0

ಶಿವಮೊಗ್ಗ(Shivamogga): ನ.6 ರಂದು ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಕೋರಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ನೂತನ ಅಧ್ಯಕ್ಷರು ನವಂಬರ್ 6ಕ್ಕೆ ಬರುವುದಾಗಿ ರಾಷ್ಟ್ರೀಯ ಅಧ್ಯಕ್ಷರು ಸಮಯ ಕೊಟ್ಟಿದ್ದಾರೆ. ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಹಲವು ದಶಕಗಳ ಬಳಿಕ ಕರ್ನಾಟಕದವರು ಅಧ್ಯಕ್ಷರಾಗಿದ್ದಾರೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ’ ಎಂದರು.

ಸ್ವಾಗತ ಸಮಾರಂಭದ ಆಯೋಜನೆ ನಿಟ್ಟಿನಲ್ಲಿ ಪೂರ್ವಸಿದ್ದತೆಗೆ ಬೆಂಗಳೂರಿನಲ್ಲಿ ಭಾನುವಾರ ಸಭೆ ಕರೆದಿದ್ದೇನೆ.. ಪಕ್ಷದ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತಿಯೊಬ್ಬರೂ ಕಾರ್ಯಕರ್ತರೊಡನೆ ಬೆಂಗಳೂರಿಗೆ ಬರಬೇಕು. ಹೊರಡಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.