ಚೆನ್ನೈ(Chennai): ನೀವು ಒಂದ್ ಸಲ ಹೊಗಳಿದ್ರೆ… ನೂರು ಸಲ ಹೊಗಳ್ದ೦ಗೆ ನಮಗೆ. ಧನ್ಯವಾದಗಳು ರಜನಿಕಾಂತ್ ಸರ್. ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ ಎಂದು ರಜನಿಕಾಂತ್ ಅವರನ್ನು ಭೇಟಿಯಾದ ಬಳಿಕ ನಟ ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಕನ್ನಡದ ಸಿನಿಮಾ ‘ಕಾಂತಾರ’ವನ್ನು ನೋಡಿ ಹೊಗಳಿದ್ದ ರಜನಿಕಾಂತ್ ಅವರನ್ನು ನಟ ರಿಷಬ್ ಶೆಟ್ಟಿ ಅವರು ಶುಕ್ರವಾರ ಚೆನ್ನೈನ ಅವರ ನಿವಾಸದಲ್ಲಿ ಭೇಟಿಯಾಗಿರುವ ಚಿತ್ರಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗಷ್ಟೆ ಸಿನಿಮಾ ನೋಡಿದ್ದ ರಜನಿಕಾಂತ್ ಅವರು ಚಿತ್ರದ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದ್ದರು.
ತಿಳಿದಿರುವುದಕ್ಕಿಂತ ತಿಳಿಯದಿರುವುದು ಬಹಳಷ್ಟಿರುತ್ತವೆ. ಹೊಂಬಾಳೆ ಫಿಲಂಸ್, ರಿಷಬ್ ಶೆಟ್ಟಿ ಉತ್ತಮ ಸಿನಿಮಾ ನೀಡಿದ್ದಾರೆ. ರಿಷಬ್ ನಟನೆ, ನಿರ್ದೆಶನ, ಬರವಣಿಗೆಗೆ ಹ್ಯಾಟ್ಸಪ್. ಮೈನವಿರಳೇಸಿರುವ ಅನುಭವ ನೀಡಿದೆ. ತಂಡಕ್ಕೆ ಶುಭಾಶಯಗಳು ಎಂದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಿಷಬ್ ಶೆಟ್ಟಿ, ‘ಸರ್ ನೀವು ಭಾರತದ ದೊಡ್ಡ ಸೂಪರ್ಸ್ಟಾರ್. ಬಾಲ್ಯದಿಂದಲೂ ನಾನು ನಿಮ್ಮ ಅಭಿಮಾನಿ. ನಿಮ್ಮ ಮೆಚ್ಚುಗೆಯಿಂದ ನನ್ನ ಕನಸು ನನಸಾದಂತಾಗಿದೆ. ಸ್ಥಳೀಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳಲು ನೀವು ನನಗೆ ಪ್ರೇರಣೆಯಾಗಿದ್ದೀರಿ’ ಎಂದು ಟ್ವೀಟ್ ಮಾಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.