ಮನೆ ರಾಜಕೀಯ ಪತ್ರಕರ್ತರಿಗೆ ಗಿಫ್ಟ್ ವಿಚಾರ: ಹಣದ ಮೂಲ ಪತ್ತೆಯಾಗಬೇಕು ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ಪತ್ರಕರ್ತರಿಗೆ ಗಿಫ್ಟ್ ವಿಚಾರ: ಹಣದ ಮೂಲ ಪತ್ತೆಯಾಗಬೇಕು ಎಂದ ಮಾಜಿ ಸಿಎಂ ಸಿದ್ದರಾಮಯ್ಯ

0

ಮೈಸೂರು(Mysuru):  ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೆ ಗಿಫ್ಟ್ ಮೂಲಕ ಹಣ ಹಂಚಿದ್ಧಾರೆ. ಈ ಕುರಿತು ತನಿಖೆಯಾಗಬೇಕು. ಹಣದ ಮೂಲ ಪತ್ತೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಬಿಜೆಪಿಯವರು ಮಹಾನ್ ಭ್ರಷ್ಟರು ಭಂಡರು , ಸುಳ್ಳಿನ ಫ್ಯಾಕ್ಟರಿ ಇಟ್ಟಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಸಾಬೀತಾಗಿದೆ. ಸರ್ಕಾರದಿಂದ 40 ಪರ್ಸೆಂಟ್ ಕಮಿಷನ್ ಬಗ್ಗೆ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಹಗರಣಗಳನ್ನು ಬಿಂಬಿಸದಂತೆ ಪತ್ರಕರ್ತರಿಗೆ ಗಿಫ್ಟ್ ಮೂಲಕ ಹಣ ನೀಡಿದ್ದಾರೆ  ಎಂದು ಆರೋಪಿಸಿದ್ದಾರೆ.

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ನವೆಂಬರ್ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗುತ್ತದೆ ಎಂದು ತಿಳಿಸಿದರು.