ಮನೆ ರಾಜಕೀಯ ಬಿಜೆಪಿ ಸರ್ಕಾರದವರು ಪತ್ರಕರ್ತರಿಗೆ ಭ್ರಷ್ಟಾಚಾರದ ಕಳಂಕ ಅಂಟಿಸಿದ್ದಾರೆ: ಎಂ.ಲಕ್ಷ್ಮಣ್

ಬಿಜೆಪಿ ಸರ್ಕಾರದವರು ಪತ್ರಕರ್ತರಿಗೆ ಭ್ರಷ್ಟಾಚಾರದ ಕಳಂಕ ಅಂಟಿಸಿದ್ದಾರೆ: ಎಂ.ಲಕ್ಷ್ಮಣ್

0

ಮೈಸೂರು(Mysuru): ಬಿಜೆಪಿ ಸರ್ಕಾರದವರು ಪತ್ರಕರ್ತರಿಗೆ ಭ್ರಷ್ಟಾಚಾರದ ಕಳಂಕವನ್ನು ಅಂಟಿಸಿದ್ದಾರೆ. ಪತ್ರಕರ್ತರ ಒಳ್ಳೆತನಕ್ಕೆ ಮಸಿ ಬಳಿಯುವ ಕೆಲಸ ಬಿಜೆಪಿಯವರು ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ನಗರದ  ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸರ್ಕಾರದಿಂದ ಆಯ್ದ ಪತ್ರಕರ್ತರಿಗೆ ದೀಪಾವಳಿ ಗಿಪ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪತ್ರಕರ್ತರನ್ನೇ ಖರೀದಿಸಲು ಹೋಗಿದ್ದಾರಲ್ಲ ಇದು ದೊಡ್ಡ ಕಳಂಕ. ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಇದರಲ್ಲಿ ಸಿಎಂ ಬೊಮ್ಮಾಯಿ, ಮಂತ್ರಿಗಳಾದ ಆರ್.ಆಶೋಕ್, ಸುಧಾಕರ್, ಅಶ್ವಥ್ ನಾರಾಯಣ್ ಸೇರಿ ಮಾಡಿದ್ದಾರೆ . ಈ ಕುರಿತು ನ್ಯಾಯಾಂಗ ತನಿಖೆ ಮಾಡಲಿ. ಮಾಧ್ಯಮದವರಿಗೆ ಅವಮಾನ ಮಾಡಿದ್ದೀರಿ. ಆಯ್ದ ಪತ್ರಕರ್ತರಿಗೆ ಮಾತ್ರ ಗಿಫ್ಟ್ ಜೊತೆ ಹಣ ಹಂಚಿಕೆ ಮಾಡಿದ್ದೀರಿ. ಗಿಪ್ಟ್ ವಿಚಾರಕ್ಕೂ ಮಾರ್ಗಸೂಚಿ ಹೊರಡಿಸಿರುವ ಸರ್ಕಾರ. ಕೋವಿಡ್ ಮಾರ್ಗ ಸೂಚಿ ಕೇಳಿದ್ದೀವಿ. ಆದರೆ, ಉಡುಗೊರೆ ಕೊಡುವುದಕ್ಕೂ ಮಾರ್ಗಸೂಚಿ ಹೊರಡಿಸಿರೋದು ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಅನ್ನೋದಕ್ಕೆ ಒಂದು ಉದಾಹರಣೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯದ ಮಾಧ್ಯಮಗಳ ಬಗ್ಗೆ ತಪ್ಪು ಗ್ರಹಿಕೆ ಮಾಡಿರುವುದು ಸರಿಯಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಮಾಧ್ಯಮಗಳನ್ನ ಖರೀದಿ ಮಾಡಲು ಹೊರಟಿರೋದು ಖಂಡನೀಯ. ಇಂಥ ಘಟನೆ ಎಲ್ಲೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.