ಮನೆ ಮನರಂಜನೆ ನಟ ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ನಟ ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

0

ಬೆಂಗಳೂರು(Bengaluru): ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜೂನಿಯರ್ ಎನ್‌’ಟಿಆರ್ , ರಾಜಕುಮಾರ್ ಅವರ ಎಲ್ಲ ಕುಟುಂಬಸ್ಥರು ಕೂಡ ಹಾಜರಿದ್ದರು.

ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಯಿತು. ಮಳೆಯಲ್ಲಿಯೇ ಕಾರ್ಯಕ್ರಮ ನಡೆಯಿತು.

ಇದೇ ವೇಳೆ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ ರಾಜಕುಮಾರ್​​​​​​ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದರು. ಇದೇ ವೇಳೆ ರಾಜ್ಯದ ಜನರಿಗೆ ನಮನ ಸಲ್ಲಿಸಿದರು. ಇದೇ ವೇಳೆ ನಟ ಶಿವರಾಜಕುಮಾರ್​ ಸಹ ರಾಜ್ಯದ ಜನರ ಅಭಿಮಾನ ಹಾಗೂ ರಾಜ್ಯ ಸರ್ಕಾರದ ಕ್ರಮಕ್ಕೆ ಅಭಿನಂದನೆ ಹೇಳಿದರು.

ಕನ್ನಡ ಮಕ್ಕಳಿಗೆ ಶುಭಾಶಯ:  ನನ್ನ ರಾಜ್ಯೋತ್ಸವದಂದು ಕನ್ನಡ ಮಕ್ಕಳಿಗೆ ಶುಭಾಶಯಗಳು…ಹೀಗೆಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು 67 ನೇ ರಾಜ್ಯೋತ್ಸವದಂದು ಕನ್ನಡಿಗರಿಗೆ ವಿಧಾನಸೌಧದ ಮುಂದೆ ನಿಂತು ಶುಭ ಕೋರಿದರು.