ಮನೆ ದೇವರ ನಾಮ ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ

0

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೇ ಮಾತೇಕಿನ್ನು ಅರಿತು ಪೇಳುವೆನಯ್ಯ !!….

ತಾಯಿ ತಂದೆಯ ಬಿಟ್ಟು ತಪವು ಮಾಡಲು ಬಹುದು
ದಾಯಾದಿ ಬಂದುಗಳ ಬಿಡಲು ಬಹುದು
ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು
ಕಾಯ ಜಾಪಿತ ನಿನ್ನಡಿಯ ಬಿಡಲಾಗದು !! ೧ ||

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೇ ಮಾತೇಕಿನ್ನು ಅರಿತು ಪೇಳುವೆನಯ್ಯ !!……

ಒಡಲು ಹಸಿಯಲು ಅನ್ನವಿಲ್ಲದೆ ಇರಬಹುದು
ಪಡೆದ ಕ್ಷೇತ್ರಗಳ ಬಿಟ್ಟು ಹೊರಡಬಹುದು!
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೇ ಬಿಡಬಹುದು
ಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು || ೨ ||

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೇ ಮಾತೇಕಿನ್ನು ಅರಿತು ಪೇಳುವೆನಯ್ಯ !!….

ಪ್ರಾಣವನ್ನು ಪರರು ಬೇಡಿದರೆತ್ತಿ ಕೊಡಬಹುದು
ಮಾನಾಭಿಮಾನವ ತಗ್ಗಿಸಲೂ ಬಹುದು
ಪ್ರಾಣಧಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು! ||೩||

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೇ ಮಾತೇಕಿನ್ನು ಅರಿತು ಪೇಳುವೆನಯ್ಯ

ರಚನೆ : ಕನಕದಾಸರು
ಗಾಯನ : ವೆಂಕಟೇಶ್ ಕುಮಾರ್