ಬೆಂಗಳೂರು(Bengaluru): ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶವೂ ಅಭಿವೃದ್ಧಿ ಹೊಂದುತ್ತದೆ. ಈ ದಿಸೆಯಲ್ಲಿ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಹೆಚ್ಚು ಅನುಕೂಲಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.
ಆಡಳಿತ ವ್ಯವಸ್ಥೆಯಲ್ಲಿ ಕೆಂಪುಪಟ್ಟಿಗೆ ವಿದಾಯ ಹೇಳಿ, ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕು. ಹೂಡಿಕೆ ಸ್ನೇಹಿ ವಾತಾವರಣ ಸೃಷ್ಟಿಸಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದಕ್ಕಾಗಿ ನಮ್ಮ ಸರ್ಕಾರ 1,500 ಹಳೆಯ ಮತ್ತು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದೆ. ದೇಶವು ಈಗ ಡಿಜಿಟಲ್ ಕ್ರಾಂತಿಯ ಹಾದಿಯಲ್ಲಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಪ್ರಧಾನಿ ಹೇಳಿದರು.
ಕರ್ನಾಟಕದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಸ್ಪರ್ಧಾತ್ಮಕ ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆಯ ಭಾಗ. ಜಗತ್ತಿನ ಹಲವು ರಾಷ್ಟ್ರಗಳ ಹೂಡಿಕೆದಾರರು ರಾಜ್ಯವೊಂದರಲ್ಲಿ ಹಲವು ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ದೇಶಕ್ಕೆ ಮತ್ತಷ್ಟು ವಿದೇಶಿ ನೇರ ಬಂಡವಾಳ ಹರಿದು ಬರಲಿದೆಇನ್ನೂ ಎಂದರು.
ಹೆಚ್ಚು ಪ್ರಮಾಣದ ವಿದೇಶಿ ನೇರ ಹೂಡಿಕೆ ಆಕರ್ಷಿಸುವುದಕ್ಕಾಗಿಯೇ ಹೊಸ ಹೊಸ ಕ್ಷೇತ್ರಗಳಲ್ಲಿ ಎಫ್’ಡಿಐಗೆ ಅನುಮತಿ ನೀಡಲಾಗಿದೆ. ರಕ್ಷಣಾ ಕ್ಷೇತ್ರದಲ್ಲೂ ವಿದೇಶಿ ಹೂಡಿಕೆಗೆ ಸಮ್ಮತಿಸಲಾಗಿದೆ ಎಂದು ಪ್ರಧಾನಿ ಹೇಳಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.