ರಾಮನಗರ(Ramnagar): ಮತೀಯ ಭಾವನೆಗೆ ಧಕ್ಕೆ ಹಾಗೂ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಕನಕಪುರದ ಕ್ರೈಸ್ತ ಧರ್ಮ ಪ್ರಚಾರಕ ಹಾಗೂ ಅವರ ಪತ್ನಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಬರ್ನಾಬಸ್ ಮತ್ತು ಅವರ ಮಡದಿ ಬೇಬಿ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮತೀಯ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 295ಎ ಅಡಿ ಪ್ರಕರಣ ದಾಖಲಾಗಿದೆ. ವಿಚಾರಣೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದರು.
ಕನಕಪುರ ಪಟ್ಟಣದ ನವಾಜಿ ಬೋರೆಯಲ್ಲಿರುವ ಬೇತೆಲ್ ಐಸಿಆರ್ಎಂ ಪ್ರಾರ್ಥನಾ ಮಂದಿರದಲ್ಲಿ ಕನಕಪುರ ತಾಲ್ಲೂಕಿನ ಚಿಕ್ಕಮುದವಾಡಿ ಸಮೀಪದ ತಾಂಡವೊಂದರ ಬುಡಕಟ್ಟು ಸಮುದಾಯದ ಹತ್ತಕ್ಕೂ ಹೆಚ್ಚು ಜನರನ್ನು ಇರಿಸಲಾಗಿದೆ. ಮಂಗಳವಾರ ಅವರನ್ನು ಬೆಂಗಳೂರಿನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಕರೆದೊಯ್ಯಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಘಟನೆ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.
ಈ ಮಾಹಿತಿ ಆಧರಿಸಿ ಕನಕಪುರ ಪೊಲೀಸರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.