ಮನೆ ರಾಜ್ಯ ಹದಿನಾರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ...

ಹದಿನಾರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ

0

ಮೈಸೂರು(Mysuru):  ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರ  ಹದಿನಾರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ತುಂಬಾ ಶಿಥಿಲವಾಗಿತ್ತು. ಈ ಶಾಲೆಯ ನಿರ್ಮಾಣಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅವಿನಾಶ್ ಅಭಿ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನಂಜಪ್ಪ ಸೇರಿದಂತೆ ಗ್ರಾಮದ ಹಲವಾರು ಮಂದಿ ಸದಸ್ಯರು ಮನವಿ ಮಾಡಿದ್ದರು.  ಅವರ ಮನವಿಗೆ ಸ್ಪಂದಿಸಿ ನನ್ನ ಶಾಸಕರ ಅನುದಾನದಲ್ಲಿ ಒಂದು ಕೊಠಡಿ ಹಾಗೂ ಐಟಿಸಿ ಕಂಪನಿ ವತಿಯಿಂದ ಎರಡು ಕೊಠಡಿಗಳು ಒಟ್ಟು ಮೂರು ಕೋಟಿಗಳನ್ನು ನಿರ್ಮಿಸಲು ಭೂಮಿ ಪೂಜೆ ನಡೆಸಲಾಗಿದೆ ಎಂದರು.

ಗ್ರಾಮಸ್ಥರ ಬೇಡಿಕೆಗಳ ಅನುಗುಣವಾಗಿ ಅವರ ಮನವಿಗೆ ಸ್ಮರಿಸಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ನಾನು ಬದ್ದನಾಗಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ವೀರಶೈವ ಮುಖಂಡ ಗುರುಪಾದ ಸ್ವಾಮಿ, ಗ್ರಾಮ ಪಂಚಾಯತಿ ಅಧ್ಯಕ್ಷ ಅವಿನಾಶ್ ಅಭಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನಂಜಪ್ಪ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜು, ಐ ಟಿ ಸಿ ಕಂಪನಿಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ತೇಜಸ್ ಕುಮಾರ್,  ಛತ್ರ ಹೋಬಳಿಯ ಉಪ ತಹಸಿಲ್ದಾರ್ ಪ್ರಸನ್ನ ಸೇರಿದಂತೆ ಮುಂತಾದವರು ಹಾಜರಿದ್ದರು.