ಮನೆ ರಾಜಕೀಯ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲ: ಆರ್.ಅಶೋಕ್ ವ್ಯಂಗ್ಯ

ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲ: ಆರ್.ಅಶೋಕ್ ವ್ಯಂಗ್ಯ

0

ಬೆಂಗಳೂರು(Bengaluru): ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆ ಮಾಡಲು ಅಭ್ಯರ್ಥಿಗಳಿಲ್ಲ. ಹಾಗಾಗಿ ಪಕ್ಷಕ್ಕೆ ಬನ್ನಿ ಬನ್ನಿ ಎಂದು ಅಧ್ಯಕ್ಷರೇ ಕರೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು.

ಡಿಕೆ ಶಿವಕುಮಾರ್ ಹೇಳಿಕೆಯನ್ನು ಗಮನಿಸಿದ್ದೇನೆ. ಅವರ ಹೇಳಿಕೆ ನೋಡಿದರೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳೇ ಇಲ್ಲ ಅನಿಸುತ್ತಿದೆ. ಕ್ಯಾಂಡಿಡೇಟ್ ಇಲ್ಲ ಬನ್ನಿ ಎಂದು ಹೇಳಿಕೆ ನೀಡುತ್ತಿದ್ದಾರೆ ಪಾಪ. ಹತಾಶರಾಗಿ ಕರೆಯುತ್ತಿದ್ದಾರೆ. 125 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಾರ್ಟಿಗೆ ಇಂತಹ ಹೀನಾಯ ಪರಿಸ್ಥಿತಿ ಬಂದಿದೆ ಎಂದರು.

ಬಿಜೆಪಿಯಲ್ಲಿರುವವರು ಹೋಗಲು ಮನಸ್ಸು ಮಾಡಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಇನ್ನೆಂದೂ ಕಾಂಗ್ರೆಸ್ ಹೋಗಬಾರದು ಎಂದು ನಮ್ಮಲ್ಲಿರುವ ಮನಸ್ಸು ಮಾಡಿದ್ದಾರೆ. ಮುದ್ದಹನುಮೇಗೌಡ, ಶಶಿಕುಮಾರ್ ಮುಂತಾದವರು ಬಿಜೆಪಿ‌ ಸೇರ್ಪಡೆ ಆಗಿದ್ದಾರೆ. ಇನ್ನೇನಿದ್ದರೂ ಮುಂದಿನ ದಿನಗಳಲ್ಲಿ ಬಿಜೆಪಿ ಪರ್ವ ಎಂದು ತಿಳಿಸಿದರು.

17 ಜನರು ನಮ್ಮೊಂದಿಗೆ ವಿಲೀನವಾಗಿದ್ದಾರೆ. ಕಾಂಗ್ರೆಸ್ ಗೆ 15 ಜನರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇಲ್ಲ. ಅಧಿಕಾರ ಇದ್ದಾಗಲೇ ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ. ಅಧಿಕಾರ ಹೋದಮೇಲೆ ಸಾಧ್ಯವೇ? ಎಂದು ಟಾಂಗ್ ನೀಡಿದರು.