ಸ್ವಚ್ಛತೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯ, ಇತ್ತೀಚೆಗೆ ದೆಹಲಿಯ ಸುಪ್ರೀಂ ಕೋರ್ಟ್’ನಲ್ಲಿ ಸೆಂಟ್ರಲ್ ಏಜೆನ್ಸಿ ವಿಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ- 2.0ಕ್ಕೆ ಚಾಲನೆ ನೀಡಿತು.
ಕಾನೂನು ಮತ್ತು ನ್ಯಾಯ ಸಚಿವಾಲಯದ ಜಾಲತಾಣದಲ್ಲಿ ಲಭ್ಯವಿರುವ ದಾಖಲೆಗಳ ಪ್ರಕಾರ, ಸುಮಾರು 27,927 ಫೈಲ್’ಗಳನ್ನು ಸ್ಕ್ಯಾನ್ ಮಾಡಿ, ಸರ್ವೋಚ್ಚ ನ್ಯಾಯಾಲಯದ ಈ ವಿಭಾಗದಲ್ಲಿ ಸುಮಾರು 2,500 ಚದರ ಅಡಿ ಜಾಗವನ್ನು ಮುಕ್ತಗೊಳಿಸಲಾಗಿದೆ.
ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಪ್ರಾರಂಭಿಸಿರುವ ಅಭಿಯಾನವು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಲ್ಲಿ ಸ್ವಚ್ಛತೆಯ ಆದರ್ಶಗಳನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದು ಸರ್ಕಾರಿ ಕಛೇರಿಗಳಲ್ಲಿ ದಕ್ಷ ಸ್ಥಳ ನಿರ್ವಹಣೆ ಮತ್ತು ಕೆಲಸದ ಅನುಭವವನ್ನು ವೃದ್ಧಿಸುವ ಉದ್ದೇಶ ಹೊಂದಿದೆ. ಅಕ್ಟೋಬರ್ 2ರಿಂದ 31ರವರೆಗೆ ವಿಶೇಷ ಅಭಿಯಾನ ನಡೆಯಿತು.
ಬಾಕಿ ಇರುವ ಪ್ರಕರಣಗಳು, ಸಂಸದೀಯ ಭರವಸೆಗಳು, ಸಾರ್ವಜನಿಕ ಕುಂದುಕೊರತೆಗಳು, ದಾಖಲೆಗಳ ನಿರ್ವಹಣೆ, ರದ್ದಿ ವಿಲೇವಾರಿ ಮತ್ತು ಬಳಕೆಯಲ್ಲಿಲ್ಲದ ಕಡತಗಳನ್ನು ತೆಗೆದುಹಾಕುವ ಗುರಿ ಈ ಅಭಿಯಾನದ್ದಾಗಿದೆ.
ದಾಖಲೆ ನಿರ್ವಹಣೆಯ ಭಾಗವಾಗಿ ಸುಮಾರು 27,927 ಕಡತಗಳನ್ನು ಪರಿಶೀಲಿಸಲಾಗಿದ್ದು ಕಾನೂನು ಸಚಿವಾಲಯದ ಜಾಲತಾಣದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ ವಿಶೇಷ ಅಭಿಯಾನದ ಅಡಿಯಲ್ಲಿ ಸುಮಾರು 2,719 ಸಾರ್ವಜನಿಕ ಕುಂದುಕೊರತೆ ಮತ್ತು ಮೇಲ್ಮನವಿಗಳನ್ನು ವಿಲೇವಾರಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.