ಮಂಡ್ಯ(Mandya): ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ. ಮತಾಂಧ ಟಿಪ್ಪುವಿಗೆ ಜಯಂತಿ ಮಾಡಿದವನ, ಕುತಂತ್ರ ರಾಜಕಾರಣಿಯ ರಾಜಕೀಯ ಭವಿಷ್ಯ ಶೀಘ್ರ ಅಂತ್ಯವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭವಿಷ್ಯ ನುಡಿದರು.
ಬಿಜೆಪಿ ಕಾರ್ಯಕರ್ತರ ಜನಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಚೆಕ್ ಮೂಲಕ ಒಂದೂವರೆ ಕೋಟಿ ಲಂಚ ಪಡೆದ ಪ್ರಕರಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜನವರಿ ವೇಳೆಗೆ ಜೈಲು ಸೇರಲಿದ್ದಾರೆ. ಜಾಮೀನಿನ ಮೇಲೆ ಹೊರ ಬರುವ ಅವರು ಚುನಾವಣೆಗೆ ಸ್ಪರ್ಧಿಸಿ, ಸೋತು ನಂತರ ನಿರುದ್ಯೋಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ನಿಮ್ಮ ಮೇಡಂ (ಸೋನಿಯಾ ಗಾಂಧಿ), ನಾಯಕ (ರಾಹುಲ್ ಗಾಂಧಿ), ಅಧ್ಯಕ್ಷ (ಡಿ.ಕೆ.ಶಿವಕುಮಾರ್) ಈಗಾಗಲೇ ಜಾಮೀನಿನ ಮೇಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ತಿಹಾರ್ ಜೈಲಿನಲ್ಲಿ ಇದ್ದುದು ಏಕೆ? ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವುದು ಖಚಿತ. ಲಂಚ ಪಡದ ಪ್ರಕರಣ ಈಗಾಗಲೇ ಹೊರಬಂದಿದೆ, ಅರ್ಕಾವತಿ ಡೀನೋಟಿಫೈ ಹಗರಣ ಕೂಡ ಹೊರಬರಲಿದೆ ಎಂದರು.
ಭ್ರಷ್ಟಾಚಾರ, ಭಯೋತ್ಪಾದನೆ, ಪರಿವಾರವಾದ ಇವು ಕಾಂಗ್ರೆಸ್ ಕೊಡುಗೆ, ಪಂಚಭೂತಗಳ ಮೇಲೂ ಹಗರಣ ಮಾಡಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರಲು ತುದಿಗಾಲಮೇಲೆ ನಿಂತಿದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮನೆ ಖಾಲಿಯಾಗಲಿದೆ. ಬಿಜೆಪಿಗೆ ಗೆಲ್ಲುವುದಷ್ಟೇ ಮುಖ್ಯ, ಯಾರೇ ಬಂದರೂ ಪಕ್ಷಕ್ಕೆ ಸ್ವಾಗತಿಸಲಾಗುವುದು ಎಂದರು.
ಬಿಜೆಪಿಗೆ ಸೇರಿದ 17 ಮುಖಂಡರನ್ನು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಪಸ್ ಕರೆದಿದ್ದಾರೆ. ಪ್ರಳಯವಾದರೂ ಸರಿ ಅವರನ್ನು ವಾಪಸ್ ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಡಿಕೆಶಿ ಕರೆಯುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ ಯಾವ ಸ್ಥಿತಿಗೆ ತಲುಪಿದೆ ನೋಡಿ ಎಂದರು.
ರಾಜ್ಯದಲ್ಲಿ ಜನನಾಯಕ, ಖಳನಾಯಕ, ಕಣ್ಣೀರು ನಾಯಕರಿದ್ದಾರೆ. ಬಿ.ಎಸ್.ಯಡಿಯೂರಪ್ಪ ಜನನಾಯಕ, ವೀರಶೈವ ಲಿಂಗಾಯತರನ್ನು ಒಡೆಯಲು ಮುಂದಾದ ಸಿದ್ದರಾಮಯ್ಯ ಖಳನಾಯಕ. ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿನ ನಾಯಕ, ಅವರು ಸಿ.ಎಂ ಆಗುವುದಕ್ಕೂ ಮೊದಲು ಕಣ್ಣೀರು ಹಾಕ್ತಾರೆ, ಸಿ.ಎಂ ಆದಮೇಲೂ ಕಣ್ಣೀರು ಹಾಕ್ತಾರೆ. ಅಪ್ಪನ ಆರೋಗ್ಯ ಸರಿ ಇಲ್ಲ ಎಂದು ಈಗ ಕಣ್ಣೀರು ಹಾಕುತ್ತಿದ್ದಾರೆ. ಮುಂದೆ ರಾಜ್ಯದಲ್ಲಿ ಜೆಡಿಎಸ್ನ ಕುಟುಂಬ ರಾಜಕಾರಣ ಮುಕ್ತವಾಗಲಿದೆ ಎಂದರು.
ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಕ್ಷೇತ್ರವೇ ಸಿಗುತ್ತಿಲ್ಲ. ತಾಕತ್ತಿದ್ದರೆ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿ, ಅವರನ್ನು ಸೋಲಿಸಿ ಕಾಡಿಗೆ ಕಳುಹಿಸುತ್ತೇವೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.