ರಾಮನಗರ(Ramnagar): ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಮೂವರು ಆರೋಪಿಗಳನ್ನು ನವೆಂಬರ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 1ನೇ ಹೆಚ್ಚುವರಿ ನ್ಯಾಯಾಧೀಶರಾದ ಎಂ. ಧನಲಕ್ಷ್ಮಿ ಆದೇಶ ಹೊರಡಿಸಿದರು.
ಇಂದು ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಆರೋಪಿಗಳನ್ನು ಮಾಗಡಿ ಪೊಲೀಸರು 1ನೇ ಜೆಎಂಎಫ್ಸಿ ಕೋರ್ಟ್’ಗೆ ಹಾಜರು ಪಡಿಸಿದರು.
ಮೃತ್ಯುಂಜಯ ಸ್ವಾಮೀಜಿ ಮತ್ತು ವಕೀಲ ಮಹದೇವ್ ಅವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಯಿತು. ಹಾಗೆ ನೀಲಾಂಬಿಕೆಯನ್ನ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವಂತೆ ಆದೇಶ ಹೊರಡಿಸಲಾಯಿತು. ನ.15ಕ್ಕೆ ಪ್ರಕರಣದ ವಿಚಾರಣೆಯನ್ನ ಮುಂದೂಡಲಾಯಿತು.
ಘಟನೆಯ ಹಿನ್ನೆಲೆ: ಈ ಮೂವರು ಆರೋಪಿಗಳು ಬಸವಲಿಂಗ ಸಾಮೀಜಿ ಸಾವಿಗೆ ಕಾರಣರಾಗಿದ್ದರು. ಕಣ್ಣೂರು ಶ್ರೀ ನಾನೇ ಹನಿಟ್ರ್ಯಾಪ್ ಮಾಡಿಸಿದ್ದೆ ಎಂದು ಒಪ್ಪಿಕೊಂಡಿದ್ದು, ನೀಲಾಂಬಿಕೆಯನ್ನ ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಲಾಗಿತ್ತು. ಸ್ವಾಮೀಜಿ ಮರ್ಯಾದೆ ತೆಗೆಯಲು ವಿಡಿಯೋ ಮಾಡಿಸಿದ್ದೆ. 3 ತಿಂಗಳ ಹಿಂದೆಯೇ ಸ್ವಾಮೀಜಿ ವಿಡಿಯೋ ರೆಡಿಯಾಗಿತ್ತು ಎಂದು ಕಣ್ಣೂರು ಶ್ರೀ(ಮೃತ್ಯುಂಜಯ ಸ್ವಾಮೀಜಿ) ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಬಂಡೆಮಠ ಶ್ರೀ ಹನಿಟ್ರ್ಯಾಪ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.