ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಪ್ರತಿ ಮೂರು ಜಿಲ್ಲೆಗಳಿಗೆ ಒಂದರಂತೆ, ಎಸ್’ಡಿ’ಆರ್’ಎಫ್ ಪಡೆ ನಿಯೋಜಿಸಲು ರಾಜ್ಯ ಸರ್ಕಾರ ಯೋಜನೆಯನ್ನು ರೂಪಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸೋಮವಾರ ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್ ಡಿ ಆರ್ ಎಫ್ ನಿರ್ದೇಶನಾಲಯ ವತಿಯಿಂದ ರಾಜಭವನದಲ್ಲಿ ಆಯೋಜಿಸಲಾದ, ಜೀವದ ಹಂಗನ್ನು ತೊರೆದು, ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ, ಹಾಗೂ ವಿಶಿಷ್ಟ ಸೇವೆಗೈದ, ಸಿಬ್ಬಂದಿಗಳಿಗೆ, ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
ನಾಗರಿಕರ ಸುರಕ್ಷತೆ ಹಾಗೂ ಆಸ್ತಿ ಪಾಸ್ತಿ ಗಳು, ಹಾಗೂ ಸಾರ್ವಜನಿಕ ಸ್ವತ್ತುಗಳ ರಕ್ಷಣೆ ಮಾಡಲು ಸರಕಾರ ಬದ್ಧವಾಗಿದೆ. ಹಲವಾರು ವರ್ಷಗಳ ನಂತರ, ರಾಜ್ಯ ಅಗ್ನಿ ಶಾಮಕ ದಳ ವನ್ನು ಬಲಪಡಿಸಲು ಸುಮಾರು 1547 ವಿವಿಧ ದರ್ಜೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಹಾಗೂ ತರಬೇತಿ ನೀಡಲಾಗುತ್ತಿದೆ ಎಂದರು.
ಅವಘಡದ ಸಂದರ್ಭದಲ್ಲಿ ಅತ್ಯಂತ ಎತ್ತರದ ಕಟ್ಟಡವನ್ನೂ ತಲುಪಲು ಅನುಕೂಲವಾಗುವಂತೆ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಏರಿಯಲ್ ಲ್ಯಾಡರ್ ಅನ್ನು ಇಲಾಖೆಗೆ ಸಮರ್ಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ಸುಮಾರು 61 ಸಿಬ್ಬಂದಿಗಳಿಗೆ, ಪದಕವನ್ನು ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು. ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಮರ್ ಕುಮಾರ್ ಪಾಂಡೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.