ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ರೈತ ಸಂಘದಿಂದ ಬಾರ್ ಕೋಲು ಚಳವಳಿ ನಡೆಸಲಾಯಿತು.
ಎಚ್ಚರಿಕೆ ಎಚ್ಚರಿಕೆ ಎಂಎಲ್ಎ, ಎಂಪಿ, ಮಂತ್ರಿಗಳೇ ಎಚ್ಚರಿಕೆ. ನಮ್ಮ ಕೈಯಲ್ಲಿ ಬಾರು ಕೋಲು ಇದೆ, ನಮ್ಮ ಹಳ್ಳಿಗೆ ಬಂದಾಗ ಬಾರು ಕೋಲಿನಲ್ಲಿ ಬಾರಿಸಬೇಕಾಗುತ್ತದೆ, ಎಂದು ಘೋಷಣೆ ಕೂಗುತ್ತಾ, ಜಿಲ್ಲಾಧಿಕಾರಿ ಕಚೇರಿ ಮುಂದೆ ಎಂಎಲ್ಎ, ಎಂಪಿ ಮಂತ್ರಿ, ವೇಷದಾರಿಗಳಿಗೆ ಬಾರುಕೋಲಿನಿಂದ ಬಾರಿಸಲು ಯತ್ನಿಸಿದಾಗ, ರೈತರಿಗೆ ಹೆದರಿ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ಆಣಕ ಮಾಡಲಾಯಿತು.
ಬಾರ್ ಕೋಲ್ ಚಳುವಳಿಯ ನೇತೃತ್ವ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸರ್ಕಾರ ಮಾರ್ವಾಡಿಗಳ ಬಂಡವಾಳಶಾಹಿಗಳ ರಿಮೋಟ್ ಕಂಟ್ರೋಲ್ ರೀತಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರು ಬಲಿಪಶುಗಳಾಗುತ್ತಿದ್ದಾರೆ ಟನ್ ಕಬ್ಬಿಗೆ 7500ರೂ ಗು ಹೆಚ್ಚು ಆದಾಯ ಇದೆ ಒಂದು ಟನ್ ಕಬ್ಬಿನಿಂದ ನೂರು ಲೀಟರ್ ಯಥನಾಲ್ ಬರುತ್ತದೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ ಲೀಟರಿಗೆ 65 ರೂ, ಹಾಗೂ ಕಬ್ಬಿನ ಸಿಪ್ಪೆಯಿಂದ 144 ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತದೆ ನಂತರ ಮಡ್ಡಿಯಿಂದ ಗೊಬ್ಬರ ಉತ್ಪಾದಿಸಲಾಗುತ್ತದೆ ಎಲ್ಲಾ ಸೇರಿ 7500 ಆದಾಯ ಬರುತ್ತದೆ, ವರ್ಷಕಾಲ ಕಷ್ಟಪಟ್ಟು ಬೆಳೆದ ರೈತನಿಗೆ 3000 ಮಾತ್ರ, ಯಾಕೆ ಈ ರೀತಿ ಅನ್ಯಾಯ ಎಂದು ಪ್ರಶ್ನಿಸಿರು.
60 -70 ವರ್ಷಗಳಿಂದ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ರೈತರ ಜಮೀನುಗಳನ್ನು ಕಿತ್ತುಕೊಳ್ಳಲು ಗಣಕಿಕರಣವಾಗುವಾಗ, ದಲ್ಲಾಳಿಗಳು, ರಿಯಲ್ ಎಸ್ಟೇಟ್ ಮಾಫಿಯಾದವರು ಬೆಂಗಳೂರು ಮೈಸೂರು ನಗರದಲ್ಲಿರುವ ಹಣ ಕೊಟ್ಟ ಶ್ರೀಮಂತರೇ ಹೆಸರಿಗೆ ದಾಖಲಾತಿಗಳನ್ನು ಸೃಷ್ಟಿ ಮಾಡಿ ರಾಜ್ಯದಲ್ಲಿ ಲಕ್ಷಾಂತರ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಿಜವಾಗಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಅನ್ಯಾಯವಾಗುತ್ತಿದೆ ಈ ಬಗ್ಗೆ ಸರ್ಕಾರ ತನಿಖೆ ನಡೆಸಿ ನ್ಯಾಯ ಕೊಡಬೇಕು ಎಂಬುದು ನಮ್ಮ ಹೋರಾಟದ ಗುರಿ ಆದರೆ ಎಂಎಲ್ಎ ,ಮಂತ್ರಿಗಳು, ಜನಸೇವೆಗಾಗಿ ಬಂದು ಜನರನ್ನ ಮರೆತಿದ್ದಾರೆ, ಅದಕ್ಕಾಗಿ ಎಚ್ಚರಿಸಲು ಬಾರ್ ಕೋಲ್ ಚಳುವಳಿ ನಡೆಸಲಾಗುತ್ತಿದೆ, ಇನ್ನು ಮುಂದೆಯೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ಹಳ್ಳಿಗಳಿಗೆ ಬಂದಾಗ ರೈತರು ಬಾರ್ಕೋಲ್ ಮೂಲಕವೇ ಉತ್ತರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಳೆದ ನಾಲ್ಕು ತಿಂಗಳಿಂದ ಕಬ್ಬು ಬೆಳೆಗಾರ ರೈತರು ರಾಜ್ಯಾದ್ಯಂತ ಕಬ್ಬಿನ ದರ ಅನ್ಯಾಯವಾಗಿದೆ ಎಂದು ಹೋರಾಟ ಮಾಡುತ್ತಿದ್ದರೂ ನಿದ್ದೆ ಮಾಡುತ್ತಿರುವ ರಾಜಕಾರಣಿಗಳಿಗೆ ಈ ಹೋರಾಟದ ಮೂಲಕ ಎಚ್ಚರಿಸುತ್ತಿದ್ದೇವೆ. ಇನ್ನು ಮುಂದೆಯೂ ಇದೇರೀತಿ ರೈತರ ಬಗ್ಗೆ ಲಘುವಾಗಿ ನಡೆದುಕೊಂಡರೆ ಅಂತಹ ಎಂ ಎಲ್ ಎ ಎಂಪಿ ಗಳಿಗೆ ಈ ಚುನಾವಣೆಯಲ್ಲಿ ರೈತರ ಶಕ್ತಿ ಏನೆಂದು ತಿಳಿಸಿಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಕೆರೆಹುಂಡಿ ರಾಜಣ್ಣ, ಹಾಡ್ಯ ರವಿ,ಅಂಬಳೆ ಮಂಜುನಾಥ್, ಲಕ್ಷ್ಮೀಪುರ ವೆಂಕಟೇಶ್,ವರಕೂಡು ಜಯರಾಮು, ಟಿ ರಾಮೇಗೌಡ, ಸೋನಹಳ್ಳಿ ದೊರೆಸ್ವಾಮಿ, ಬಸವಣ್ಣ, ಮಂಜುನಾಥ್, ಕುರುಬೂರು ಮಂಜು,ಮಾರ್ಬಳ್ಳಿ ನೀಲಕಂಠಪ್ಪ, ಚುಂಚರಾಯನಹುಂಡಿ ತಮಯಪ್ಪ, ಮಲ್ಲಪ್ಪ, ಮಾದೇವಸ್ವಾಮಿ, ಮುದ್ದಹಳ್ಳಿ ಶಿವಣ್ಣ, ದಿನೇಶ್ ಇದ್ದರು.