ಮನೆ ಅಪರಾಧ ನಿವೃತ್ತ ಗುಪ್ತಚರ ಇಲಾಖೆ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ

ನಿವೃತ್ತ ಗುಪ್ತಚರ ಇಲಾಖೆ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ

0

ಮೈಸೂರು(Mysuru): ನಿವೃತ್ತ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನ ಮಾಡಲಾಗಿದೆ. ಹಲವರ ವಿಚಾರಣೆ ನಡೆಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನೆರೆಮನೆಯ‌‌ ಮಾದಪ್ಪ‌ ಪುತ್ರ ಮನು(30) ಈತನ‌ ಸ್ನೇಹಿತ ವರುಣ್ ಬಂಧಿತರು ಎಂದು ತಿಳಿಸಿದದಾರೆ.

ನವೆಂಬರ್ 04 ರಂದು ಮಾನಸ ಗಂಗೋತ್ರಿ ಕ್ಯಾಂಪಸ್​ನಲ್ಲಿ ಸಂಜೆ ವಾಕ್ ಮಾಡುತ್ತಿದ್ದಾಗ ನಾಮಫಲಕವಿಲ್ಲದ ಕಾರೊಂದು ನಿವೃತ್ತ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿ ಆರ್.ಎಸ್ ಕುಲಕರ್ಣಿ (83 ವರ್ಷ) ಅವರಿಗೆ ಗುದ್ದಿದೆ. ಅವರನ್ನು ಅಪಘಾತದ ರೀತಿಯಲ್ಲಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ವಿಶೇಷ ತನಿಖಾ ದಳವನ್ನು ರಚಿಸಲಾಗಿತ್ತು.

ಈ ಪ್ರಕರಣದಲ್ಲಿ ಕೊಲೆಯಾದ ನಿವೃತ್ತ ಅಧಿಕಾರಿಯ ಮನೆಯ ಪಕ್ಕ, ಹೊಸ ಮನೆ ನಿರ್ಮಾಣ ಮಾಡುತ್ತಿದ್ದ ಮಾದಪ್ಪ ಎಂಬ ವ್ಯಕ್ತಿ ನಡುವೆ ಗಲಾಟೆಯಾಗಿತ್ತು. ಈ ಸಂಬಂಧ ಕೊಲೆಯಾದ ಕುಲಕರ್ಣಿ ಅವರು ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಹಲವರಿಗೆ ಪಕ್ಕದ ಮನೆಯವರು ಕಾನೂನು ಉಲ್ಲಂಘಿಸಿ ಅಕ್ರಮ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಅಲ್ಲದೇ ನ್ಯಾಯಾಲಯದಲ್ಲೂ ಪ್ರಕರಣ ಸಹ ದಾಖಲಿಸಿದ್ದರು.

ಇದರಿಂದ ಕೋಪಗೊಂಡಿದ್ದ ಮಾದಪ್ಪನ ಮಗ ಮನು (30 ವರ್ಷ) ಕುಲಕರ್ಣಿಯ ಕೊಲೆಗಾಗಿ ಕಾರು ಖರೀದಿಸಿದ್ದ. ಪ್ರತಿದಿನ ವಾಕಿಂಗ್ ಮಾಡುತ್ತಿದ್ದ ಸ್ಥಳವನ್ನು ಸ್ನೇಹಿತ ವರುಣ್ ಜೊತೆ ಹೋಗಿ ನೋಡಿಕೊಂಡು ಬಂದಿದ್ದ. ಶುಕ್ರವಾರ ಸಂಜೆ ಕಾರಿನ ನಂಬರ್ ಪ್ಲೇಟ್ ತೆಗೆದು ವಾಕಿಂಗ್ ಮಾಡುತ್ತಿದ್ದ, ಕುಲಕರ್ಣಿಗೆ ಗುದ್ದಿ ಸಾಯಿಸಿದ್ದಾನೆ ಎಂದು ಮಾಹಿತಿ ನೀಡಿದರು.

ಮನು ಎಂಬಾತ ಎಂಬಿಎ ಪದವೀಧರನಾಗಿದ್ದು, ಈತನನನ್ನು ಬಂಧಿಸಲಾಗಿದೆ. ಹಾಗೂ ಆತನಿಗೆ ಸಹಾಯ ಮಾಡಿದ್ದ ವರುಣ್ ಎಂಬಾತ, ಕಾರು ಮಾಲೀಕ ರಘು ಎಂಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಂದು ಮಾಹಿತಿ ನೀಡಿದರು.