ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ನಟನೆಯ, ಕೆ.ರಾಮ್ನಾರಾಯಣ್ ನಿರ್ದೇಶನದ ಸಿನಿಮಾ ‘ಅಬ್ಬರ’ ಇದೇ ತಿಂಗಳ 18 ರಂದು ತೆರೆಕಾಣಲಿದೆ.
ಕಳೆದ ಆಗಸ್ಟ್ 12ರಂದೇ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಬಿಡುಗಡೆ ದಿನಾಂಕವನ್ನೂ ಘೋಷಿಸಿದ್ದ ಚಿತ್ರತಂಡ, ಕೊನೆಯ ಕ್ಷಣದಲ್ಲಿ ಚಿತ್ರ ಬಿಡುಗಡೆಯನ್ನು ಮುಂದೂಡಿತ್ತು.
‘ಅಬ್ಬರ’ ಸಿನಿಮಾದಲ್ಲಿ ಐದಾರು ಶೇಡ್ಸ್ಗಳಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದು, ಪ್ರಜ್ವಲ್ಗೆ ನಾಯಕಿಯರಾಗಿ ಲೇಖಾ ಚಂದ್ರ, ನಿಮಿಕಾ ರತ್ನಾಕರ್, ರಾಜಶ್ರೀ ಪೊನ್ನಪ್ಪ ನಟಿಸಿದ್ದಾರೆ.
ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ನಟ ದೇವರಾಜ್ ಬಿಡುಗಡೆಗೊಳಿಸಿದರು.
ನಟ ದೇವರಾಜ್ ಮಾತನಾಡಿ,`ಅಬ್ಬರ’ ಎಂಬ ಶೀರ್ಷಿಕೆ ಹೊತ್ತ ಈ ಸಿನಿಮಾವೂ ಅಬ್ಬರಿಸುವ ನಂಬಿಕೆ ನನಗಿದೆ. ಏಕೆಂದರೆ ಕನ್ನಡ ಚಿತ್ರರಂಗಕ್ಕೀಗ ಶುಕ್ರದೆಸೆ ಬಂದಿದೆ. ಕನ್ನಡ ಸಿನಿಮಾಗಳನ್ನು ದೇಶದೆಲ್ಲೆಡೆ ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರಪಂಚದಾದ್ಯಂತ ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಹೆಸರು ಬರುತ್ತಿದೆ. ಇಂತಹ ಸಂದರ್ಭದಲ್ಲಿ ಅಬ್ಬರ ಬಿಡುಗಡೆ ಮಾಡುತ್ತಿರುವ ನಿರ್ಮಾಪಕ ಬಸವರಾಜ್ ಮಂಚಯ್ಯ ಅವರಿಗೂ ಶುಕ್ರದೆಸೆ ಆಗಲಿ. ಶೀರ್ಷಿಕೆಯೇ ಕಮರ್ಷಿಯಲ್ ಅಂಶವನ್ನು ಒಳಗೊಂಡಿದೆ. ಚಿತ್ರದ ಟ್ರೈಲರ್ ಕೂಡಾ ಅಬ್ಬರವಾಗಿದೆ. ಹಾಡುಗಳೂ ಸುಂದರವಾಗಿ ಮೂಡಿಬಂದಿದೆ’ ಎಂದರು.
ನಟ ಪ್ರಜ್ವಲ್ ದೇವರಾಜ್ ಚಿತ್ರ ಕುರಿತು ಮಾತನಾಡಿ, ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಖುಷಿಯೂ, ಕುತೂಹಲವೂ ಇದೆ. ಪ್ರೇಕ್ಷಕರು ಈ ಪಾತ್ರಗಳನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಪ್ರಶ್ನೆಯೂ ಇದೆ. ಸಿನಿಮಾವನ್ನು ಶ್ರದ್ಧೆಯಿಂದ ಮಾಡಿದಾಗ, ಸಿನಿಮಾ ಗೆಲ್ಲುವ ನಂಬಿಕೆಯೂ ಹುಟ್ಟಿಕೊಳ್ಳುತ್ತದೆ. ಹಲವು ಶೇಡ್ಸ್ನಲ್ಲಿ ನಾನಿಲ್ಲಿ ಕಾಣಿಸಿಕೊಂಡಿದ್ದೇನೆ. ದೊಡ್ಡ ತಾರಾಗಣವೇ ಚಿತ್ರದಲ್ಲಿದೆ ಎಂದಿದ್ದಾರೆ.
ಖಳನಾಯಕನ ಪಾತ್ರಕ್ಕೆ ರವಿಶಂಕರ್ ಬಣ್ಣಹಚ್ಚಿದ್ದು, ಶೋಭರಾಜ್, ಕೋಟೆ ಪ್ರಭಾಕರ್, ವಿಕ್ಟರಿ ವಾಸು ಮುಂತಾದವರು ತಾರಾಬಳಗದಲ್ಲಿದ್ದಾರೆ. ‘ಕೆ.ಜಿ.ಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನ, ಜೆ.ಕೆ.ಗಣೇಶ್ ಅವರ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಚಿತ್ರಕ್ಕಿದೆ.