ಮನೆ ರಾಜಕೀಯ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ಸತೀಶ್ ಜಾರಕಿಹೊಳಿಯನ್ನು ಪಕ್ಷದಿಂದ ಹೊರ ಹಾಕಲಿ: ಆರಗ ಜ್ಞಾನೇಂದ್ರ

ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ಸತೀಶ್ ಜಾರಕಿಹೊಳಿಯನ್ನು ಪಕ್ಷದಿಂದ ಹೊರ ಹಾಕಲಿ: ಆರಗ ಜ್ಞಾನೇಂದ್ರ

0

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಜಾರಕಿಹೊಳಿ ಅವರನ್ನು ಪಕ್ಷದಿಂದ ಹೊರಗೆ ಹಾಕಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದರು.

ಜಿಲ್ಲಾ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೂ ಧರ್ಮ ಅಶ್ಲೀಲವಲ್ಲ, ಕಾಂಗ್ರೆಸ್ ಅಶ್ಲೀಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ವೋಟ್ ಬ್ಯಾಂಕ್ ಮಾಡಿಕೊಳ್ಳಲು ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಿದೆ. ಧರ್ಮವನ್ನು ಒಡೆದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಹಿಂದೂ ಧರ್ಮ ಒಟ್ಟಾಗಿ ಇರಲು ಕಾಂಗ್ರೆಸ್ ಬಿಡುವುದಿಲ್ಲ. ಧರ್ಮಗಳನ್ನು ವಿಂಗಡಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಮುಖಂಡರ ಹೇಳಿಕೆ ಗಮನಿಸಿದರೆ ಮಗುವನ್ನು ಚಿವುಟಿ, ತೊಟ್ಟಿಲು ತೂಗುವಂತಿದೆ ಎಂದು ಕುಟುಕಿದರು.