ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ಹಿಂದೂ ಪದ ಅಶ್ಲೀಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ. ಇದು ಸರಿಯಲ್ಲ ಎಂದರು.
ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಎಲ್ಲಾ ಅರಿವಿದ್ದರೂ ಜನರ ಸಮಸ್ಯೆ ಕೇಳಲು ಯಾರೂ ತಯಾರಿಲ್ಲ. ನಾನು ಹೊಡೆದಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎನ್ನುವಂಥ ನೀತಿ ಅನುಸರಿಸುತ್ತಿವೆ. ಇವರ ಯೋಗ್ಯತೆ ಏನು ಎನ್ನುವುದು ಜನರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಬಸವನಗುಡಿ ಕ್ಷೇತ್ರದಲ್ಲಿ ಹೆಚ್ಡಿಕೆ ಯಾತ್ರೆ:
ಇದಾದ ನಂತರ ಕ್ಷೇತ್ರದ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ತೆರೆದ ವಾಹನದಲ್ಲಿ ಮಾಜಿ ಮುಖ್ಯಮಂತ್ರಿಗಳು ಮೆರವಣಿಗೆ ಸಾಗಿದರು. ಎನ್ ಆರ್ ಕಾಲೊನಿ, ಹನುಮಂತ ನಗರ, ಶ್ರೀನಗರ ಬಸ್ ನಿಲ್ದಾಣ, ಪಿಇ ಎಸ್ ಕಾಲೇಜು, ಹನುಮಂತನಗರ ಮುಖ್ಯರಸ್ತೆ, ಸೀತಾ ಸರ್ಕಲ್ ವರೆಗೆ ಸುಮಾರು ೮ ಕಿ.ಮೀ. ದೂರ ಕ್ರಮಿಸಿದರು.
ಬಸವನಗುಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಇಂದಿನಿಂದ ಮನೆ ಮನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪಕ್ಷದ ಮುಖಂಡ ಬಾಗೇಗೌಡ ಹಾಗೂ ವಿಧಾನ ಪರಿಷತ್ ಸದಶ್ಯ ಟಿ.ಎ. ಶರವಣ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಮ್ಮ ಪಕ್ಷದ ಅಭ್ಯರ್ಥಿ ಅರಮನೆ ಶಂಕರ್ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತಾರೆ ಎಂದರು ಮಾಜಿ ಮುಖ್ಯಮಂತ್ರಿ ಅವರು.
ಸೀತಾ ಸರ್ಕಲ್ ಬಳಿ ನೂತನವಾಗಿ ಸ್ಥಾಪಿಸಲಾಗಿರುವ ಜೆಡಿಎಸ್ ಕಚೇರಿಯನ್ನು ಮಾಜಿ ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ನರೇಂದ್ರ ಮೋದಿ ಅವರಿಂದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರಲ್ಲ
ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.
ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿಯವರು ಲೆಕ್ಕಾಚಾರ ಮಾಡಿದ್ದಾರೆ. ಬಿಜೆಪಿ ನಾಯಕರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಆ ಭ್ರಮೆಯಿಂದ ಹೊರ ತರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.
ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು ಅವರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಅದರಿಂದ ಹೊರ ತರುತ್ತಾರೆ ಎಂದು ಅವರು ಹೇಳಿದರು.
ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.