ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಬನ್ನಿ ಮೋದಿ ನಮ್ಮ ಊರಿಗೆ… ಟಾರು ಕಾಣದ ನಮ್ಮ ಬೀದಿಗೆ… 40-80 ಪರ್ಸೆಂಟ್ ನುಂಗಿದ ನಿಮ್ಮ ಬಿಜೆಪಿ ನಾಯಕರ ಭ್ರಷ್ಟಾಚಾರದ ತವರಿಗೆ, ಹೇಳಿಬಿಡಿ ನಿಮ್ಮದೆಷ್ಟು – ನಿಮ್ಮ ಕೋರ್ ಕಮಿಟಿಗೆಷ್ಟು? ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಚಾಟಿ ಬೀಸಿದೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮೋದಿ ಆಗಮನದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮುಚ್ಚುತ್ತಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ರಾಜಧಾನಿಗೆ ನ.11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ಬಿಬಿಎಂಪಿ ತ್ವರಿತಗತಿಯಲ್ಲಿ ರಸ್ತೆಗಳಿಗೆ ಕಾಯಕಲ್ಪ ನೀಡುವ ಕಾರ್ಯದಲ್ಲಿ ತೊಡಗಿದೆ.
ಪ್ರಧಾನಿ ಸಾಗುವ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಪಾಲಿಕೆ ಆದ್ಯತೆ ನೀಡಿದ್ದು, ಸಮರೋಪಾದಿಯಲ್ಲಿ ಈ ಕಾರ್ಯ ನಡೆದಿದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಗುಬ್ಬಿ ತೋಟದಪ್ಪ ರಸ್ತೆ, ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆ ಮತ್ತು ಓಕಳೀಪುರಂ ರಸ್ತೆ ಸೇರಿ ನಗರದ ವಿವಿಧ ರಸ್ತೆಗಳಿಗೆ ಡಾಂಬರೀಕರಣ ಮತ್ತು ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತು #ಬೊಮ್ಮಾಯಿಗುಂಡಿಮುಚ್ಚಿಸಿದರುಮೋದಿ ಎಂಬ ಹ್ಯಾಷ್ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ,ಮಾಡುವುದು 40 ಪರ್ಸೆಂಟ್ ಅನಾಚಾರ, ಮೋದಿ ಬಂದಾಗ ಮಾಡ್ತಾರೆ ಬೃಂದಾವನ. ಇಷ್ಟೇ ಯಾಕೆ , ಬಿಟ್ರೆ ಅಕ್ಕಪಕ್ಕ ಏನು ಕಾಣದಂತೆ ಬಿಳಿಯ ಬಟ್ಟೆ ಕಟ್ಟಿಬಿಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಣ್ಣಿಗೆ ಬಟ್ಟೆ ಕಟ್ಟಿದ್ದರು. ಬಿಜೆಪಿಯವರು ಮೋದಿ ಕಣ್ಣಿಗೆ ಬಟ್ಟೆ ಕಟ್ಟೋ ಮನೋಭಾವದವರು ಎಂದು ವ್ಯಂಗ್ಯ ಮಾಡಿದೆ.
‘ಧನ್ಯವಾದಗಳು ಮೋದಿಯವರೇ ತಿಂಗಳಿಗೊಮ್ಮೆ ಬರ್ತಾ ಇರಿ’ ಎಂದು ಕುಹಕವಾಡಿದೆ.
2020ರ ಫೆಬ್ರುವರಿ ತಿಂಗಳಲ್ಲಿ ಅಂದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಜರಾತ್ನ ಅಹಮದಾಬಾದ್ಗೆ ಭೇಟಿ ನೀಡಿದ್ದರು. ಅದು ವರೆಗೆ ಗುಂಡಿಗಳು ತುಂಬಿದ್ದ ಅಹಮದಾಬಾದಿನ ಅನೇಕ ರಸ್ತೆಗಳು ಟ್ರಂಪ್ ಆಗಮನದ ಹಿನ್ನೆಲೆಯಲ್ಲಿ ಡಾಂಬರಿನಿಂದ ಕಂಗೊಳಿಸಿದ್ದವು. ರಸ್ತೆಯ ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗಗಳು ನಿರ್ಮಾಣವಾಗಿದ್ದವು. ಮೇಲಾಗಿ ರಸ್ತೆಯ ಇಕ್ಕೆಲಗಳಲ್ಲಿ ಹರಡಿಕೊಂಡಿದ್ದ ಎಲ್ಲಾ ಬಗೆಯ ‘ಅಂದಗೇಡಿ ಆಕೃತಿ’ಗಳನ್ನು ಮರೆಮಾಚಲು ಹಸಿರು ಬಣ್ಣದ ಪರದೆಗಳನ್ನು ಕಟ್ಟಲಾಗಿತ್ತು. ಅದಕ್ಕಿಂತ ಮುಖ್ಯವಾಗಿ ಟ್ರಂಪ್ ಸಂಚರಿಸುವ ಹಾದಿಯಲ್ಲಿ ಇರುವ ಒಂದೆರಡು ಕೊಳೆಗೇರಿಗಳು ಗೋಚರಿಸದಂತೆ ಗೋಡೆಗಳು ಎದ್ದುನಿಂತಿದ್ದವು. ಟ್ರಂಪ್ ಆಗಮನಕ್ಕಾಗಿ ಗುಜರಾತ್ನ ಬಿಜೆಪಿ ಸರ್ಕಾರ ಮಾಡಿದ್ದ ಈ ವ್ಯವಸ್ಥೆ ಭಾರೀ ಟೀಕೆಗೆ ಗುರಿಯಾಗಿತ್ತು.