ಮನೆ ರಾಜಕೀಯ ಹಿಂದೂ ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಕಾಂಗ್ರೆಸ್: ಸಿಎಂ ಬೊಮ್ಮಾಯಿ

ಹಿಂದೂ ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಕಾಂಗ್ರೆಸ್: ಸಿಎಂ ಬೊಮ್ಮಾಯಿ

0

ಬೆಳಗಾವಿ(Belagavi): ಕಾಂಗ್ರೆಸ್ ಸಂಸ್ಕೃತಿಯೇ ಯಾವಾಗಲೂ ವಿಭಜಿಸುವ ಶಕ್ತಿಗಳ ಜೊತೆ ಕೈ ಜೋಡಿಸುತ್ತದೆ. ಹಿಂದೂ ಧರ್ಮವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆಯನ್ನು ಹಿಂಪಡೆದು ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ದೇವಸ್ಥಾನಕ್ಕೆ ಹೋಗುವಂತದ್ದು, ಟೆಂಪಲ್ ರನ್ ಮಾಡುವಂತದ್ದು ಸಹಜವಾಗಿ ಅವರು ಎಲ್ಲ ವೋಟ್’ಬ್ಯಾಂಕ್ ಸಲುವಾಗಿ ಮಾಡ್ತಾರೆ. ಅಲ್ಪಸಂಖ್ಯಾತರ ತುಷ್ಠಿಕರಣ ಜೊತೆಗೆ ವಕ್ಫ್ ಪ್ರಾಪರ್ಟಿಯನ್ನ ಮುಚ್ಚಿದ್ದಾರೆ. ಅಧಿಕಾರಕ್ಕಾಗಿ ಹಿಂದೂಗಳನ್ನ ದ್ವೇಷಿಸುವುದು, ದೂಷಿಸುವುದು ಮಾಡ್ತಿದ್ದಾರೆ ಎಂದು ಹೇಳಿದರು.

ಮಾತನಾಡುವುದು ಅಷ್ಟೇ ಅಲ್ಲ ಸಮರ್ಥನೆ ಮಾಡುವ ಸಾಹಸ ಮಾಡಿದ್ದಾರೆ. ಈಗ ವಿಷಾದ ವ್ಯಕ್ತಪಡಿಸಿದ್ದೀನಿ ಅನ್ನೋದು ಎಷ್ಟರ ಮಟ್ಟಿಗೆ ಸರಿ?. ತಪ್ಪು ಅನ್ನೋದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ. ನನಗೆ ಆಶ್ಚರ್ಯ ಆಗಿರುವಂಥದ್ದು ಸತೀಶ್ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ ಅಲ್ಲಿನ ಸಂಸ್ಕೃತಿ ಪ್ರಭಾವದಿಂದ ಹೀಗಾಗಿದೆ ಎಂದರು.

ದೇಶದ ಅಭಿಮಾನ ಆಗಲಿ, ಪ್ರೀತಿ ಆಗಲಿ ಎಳ್ಳುಕಾಳಷ್ಟು ಇಲ್ಲ. ಇದಕ್ಕೆ ಹತ್ತು ಹಲವಾರು ಉದಾಹರಣೆ ನೀಡಬಹುದು. ಹೀಗಾಗಿ ರಾಜಕಾರಣಕ್ಕಾಗಿ, ಮತಕ್ಕಾಗಿ ಮಾಡುವ ಕೆಟ್ಟ ರಾಜಕಾರಣ ನಿಲ್ಲಬೇಕು. ಸತೀಶ್ ಜಾರಕಿಹೊಳಿ ಪತ್ರ ಏನಿದೆ ನೋಡುತ್ತೇನೆ. ತನಿಖೆ ಮಾಡುವುದಕ್ಕೆ ಏನಿದೆ?. ಅವರು ಯಾವ ಆಧಾರದ ಮೇಲೆ ಇದನ್ನ ಮಾತಾಡಿದ್ದಾರೆ ಅದನ್ನ ಬಹಿರಂಗಪಡಿಸಬೇಕು. ಅದರ ದೃಢೀಕರಣ ಆಧರಿಸಿ ಅದರ ಸತ್ಯಾಸತ್ಯತೆ ಹೊರಗೆ ತರಬಹುದು ಎಂದು ಹೇಳಿದರು.