ಮನೆ ಅಪರಾಧ ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ

0

ಮೈಸೂರು : ಬೈಕ್​​ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆಗೈದಿರುವ ಘಟನೆ ತಾಲೂಕಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.


ಮೆಲ್ಲಹಳ್ಳಿಯ ಮನೋಜ್​​​ಗೆ(24) ಮೃತ ಯುವಕ.
ಅದೇ ಗ್ರಾಮದ ರಘು, ಸಚಿನ್, ಕಿರಣ್​, ಶಂಕರ್​ ಎಂಬುವವರು ಚಾಕುವಿನಿಂದ ಇರಿದು​ ಕೊಲೆ ಮಾಡಿದ್ದಾರೆ.


ಹುಟ್ಟುಹಬ್ಬ ಆಚರಣೆ ಸೇರಿದಂತೆ ಹಲವು  ಸಣ್ಣ ಪುಟ್ಟ ವಿಚಾರಗಳಿಗೆ ಆಗಾಗ ಗ್ರಾಮದಲ್ಲಿ ಗಲಾಟೆಯಾಗುತ್ತಿತ್ತು.
ಇದೇ ವಿಚಾರಕ್ಕೆ ಮನೋಜ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಗೆ ಹೋಗುತ್ತಿದ್ದ ವೇಳೆ ಬೈಕ್​ ಅಡ್ಡಗಟ್ಟಿ ಮನೋಜ್ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.