ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಅಡಿಲೇಡ್: ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಎರಡರಲ್ಲೂ ಟೀಮ್ ಇಂಡಿಯಾಗೆ ಸೆಡ್ಡು ಹೊಡೆದ ಇಂಗ್ಲೆಂಡ್ 10 ವಿಕೆಟ್ಗಳ ದಾಖಲೆಯ ಜಯ ದಕ್ಕಿಸಿಕೊಳ್ಳುವ ಮೂಲಕ 2022ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ಗೆ ದಾಪುಗಾಲಿಟ್ಟಿದೆ.
ಇಲ್ಲಿನ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿತ್ತು.
ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ ಪರ ಆರಂಭಿಕರಾದ ನಾಯಕ ಜಾಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಅತ್ಯುತ್ತಮವಾಗಿ ಬ್ಯಾಟ್ ಬೀಸಿದರು.
ಭಾರತದ ಬೌಲರ್’ಗಳೆದುರು ಲೀಲಾಜಾಲವಾಗಿ ಬ್ಯಾಟ್ ಬೀಸಿದ ಈ ಇಬ್ಬರು ತಮ್ಮ ತಂಡಕ್ಕೆ ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ ಜಯ ತಂದುಕೊಟ್ಟರು.
ಬೀಸಾಟವಾಡಿದ ಹೇಲ್ಸ್ ಮತ್ತು ಬಟ್ಲರ್ 16 ಓವರ್ಗಳಲ್ಲಿ 170 ರನ್ ಕಲೆಹಾಕಿದರು. ಹೇಲ್ಸ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 89 ರನ್ ಚಚ್ಚಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಬಟ್ಲರ್ 49 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ಸಹಿತ ರನ್ ಸಿಡಿಸಿದರು.
ಇದು ಈ ಬಾರಿಯ ವಿಶ್ವಕಪ್ನಲ್ಲಿ ಯಾವುದೇ ತಂಡದ ಪರ ಮೊದಲ ವಿಕೆಟ್ ಜೊತೆಯಾಟದಲ್ಲಿ ಬಂದ ಅತ್ಯಧಿಕ ಮೊತ್ತವಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಸೆಮಿಫೈನಲ್ನಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ 105 ರನ್ ಗಳಿಸಿದ್ದರು. ಇದು ಎರಡನೇ ಅತ್ಯುತ್ತಮ ಜೊತೆಯಾಟವಾಗಿದೆ.
ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 13ರಂದು ಮೆಲ್ಬರ್ನ್ನಲ್ಲಿ ನಡೆಯಲಿದೆ. ಈಗಾಗಲೇ ಫೈನಲ್ ತಲುಪಿರುವ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಪ್ರಶಸ್ತಿಗಾಗಿ ಸೆಣಸಾಡಲಿವೆ.
ಭಾರತ ತಂಡದ ವೈಫಲ್ಯ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಪರ ಇನಿಂಗ್ಸ್ ಆರಂಭಿಸಿದ ಉಪನಾಯಕ ಕೆ.ಎಲ್.ರಾಹುಲ್ ಕೇವಲ 5 ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ 27 ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ (14) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ, ರನ್ ಗಳಿಕೆಗೆ ಕಡಿವಾಣ ಬಿದ್ದಿತು.
ಈ ವೇಳೆ ವಿಕೆಟ್ ಬೀಳದಂತೆ ಎಚ್ಚರಿಕೆಯ ಆಟವಾಡಿದ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ, ನಾಲ್ಕನೇ ವಿಕೆಟ್ ಪಾಲುದಾರಿಕೆಯಲ್ಲಿ 61 ರನ್ ಕೂಡಿಸಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಇವರಿಬ್ಬರೂ ನಿಧಾನವಾಗಿ ರನ್ ಗತಿ ಹೆಚ್ಚಿಸುವ ಪ್ರಯತ್ನ ಮಾಡಿದರು.
ಈ ಟೂರ್ನಿಯಲ್ಲಿ 4ನೇ ಅರ್ಧಶತಕ ಗಳಿಸಿದ ಕೊಹ್ಲಿ, 40 ಎಸೆತಗಳಲ್ಲಿ 50 ರನ್ ಗಳಿಸಿದರೆ, ಪಾಂಡ್ಯ 33 ಎಸೆತಗಳಿಂದ 63 ರನ್ ಬಾರಿಸಿದರು. ಹೀಗಾಗಿ ಟೀಂ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.
ಬಳಿಕ ಬೌಲಿಂಗ್ನಲ್ಲಿಯೂ ವೈಫಲ್ಯ ಅನುಭವಿಸಿದ ಭಾರತ, ಎದುರಾಳಿ ತಂಡದ ಒಂದೇ ಒಂದು ವಿಕೆಟ್ ಸಹ ಪಡೆಯದೆ ಮುಖಭಂಗ ಅನುಭವಿಸಿತು.ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ ಮೂರು ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್, ಆದಿಲ್ ರಶೀದ್ ತಲಾ ಒಂದೊಂದು ವಿಕೆಟ್ ಕಿತ್ತರು.