ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಇಂದು ಉನ್ನತ ಶಿಕ್ಷಣ ಮಾಡುತ್ತಿರುವ ಎಷ್ಟೋ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಅನಿವಾರ್ಯವಾಗಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಬೇಸರ ವ್ಯಕ್ತಪಡಿಸಿದರು.
ಮಾನಸ ಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಪ್ರೊ. ಎಂ.ಎಸ್.ಶೇಖರ್ ಅವರ ಸೋಸಲೆ ಸಿದ್ದಪ್ಪ ಸಮಗ್ರ ಸಂಪುಟ (ಸಂಪಾದಿತ) ಮತ್ತು ಹೊರಳು ಹಾದಿ (ವಿಮರ್ಶೆ) ಕೃತಿಗಳ ಬಿಡುಗಡೆ ಹಾಗೂ ವಿಚಾರಗೋಷ್ಢಿ ಸಮಾರಂಭದಲ್ಲಿ ಮಾತನಾಡಿದರು.
ಇಂದು ಸಾಕಷ್ಟು ಸಂಶೋಧನಾ ವಿದ್ಯಾರ್ಥಿಗಳಿಗೆ ಧೈರ್ಯ ಇಲ್ಲ. ಉಪನ್ಯಾಸ ವೃತ್ತಿಗೆ ಹೋಗಲು ಹಿಂಜರಿಯುತ್ತಾರೆ. ಪ್ರೆಸೆಂಟೇಶನ್ ಬರಲ್ಲ. ಉರು ಹೊಡೆದು ಪಾಸಾಗಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಪಾಸಾಗಲು ಹೆದರುತ್ತಾರೆ. ಬೋಧಕೇತರ ವಿಭಾಗಕ್ಕೆ ಕೆಲಸ ಕೊಡಿಸಿ ಅನ್ನುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಕ್ಕಳು ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದು ಜ್ಞಾನವನ್ನು ವಿಕಾಸ ಮಾಡುತ್ತದೆ. ಡಾ.ಬಿ.ಆರ್. ಅಂಬೇಡ್ಕರ್ ಓದಿನ ಮೂಲಕ ಜ್ಞಾನ ಸಂಪಾದನೆ ಮಾಡಿಕೊಂಡರು. ಓದು ನಿಮ್ಮನ್ನು ಎತ್ತರಕ್ಕೆ ಕರೆದುಕೊಂಡು ಹೋಗುತ್ತದೆ. ಇಂದು ಅಂಬೇಡ್ಕರ್ ಅವರ ಮೀಸಲು ನೀತಿಯಿಂದ ಲೋಕಸಭೆಯಲ್ಲಿ ನಾವು ಕೂರಲು ಸಾಧ್ಯವಾಯಿತು. ವಿದ್ಯಾವಂತನಾದರೆ ಕೆಚ್ಚು ಬರುತ್ತದೆ. ಪರೀಕ್ಷೆಗೆ ಬೇಕಾದ ಓದು ಇದ್ದರೆ ಸಾಲದು. ಕಠಿಣ ಶ್ರಮ ವಿನಿಯೋಗಿಸಬೇಕು ಎಂದು ಹೇಳಿದರು.
ಬುದ್ಧ ಅಧ್ಯಯನ ಕೇಂದ್ರ ಸ್ಥಾಪನೆಗೆ ಪ್ರಧಾನ ಮಂತ್ರಿ ಬಳಿಯೂ ಮಾತನಾಡಿದ್ದೇನೆ. ಸಿಎಂ ಬಸವರಾಜ್ ಬೊಮ್ಮಾಯಿ ಜಾಗ ನೀಡಿದರೆ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.
ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಮಾತನಾಡಿ, ಪ್ರೊ.ಎಂ.ಎಸ್.ಶೇಖರ್ ಅವರ ಎರಡು ಕೃತಿಗಳು ಇಂದು ಬಿಡುಗಡೆ ಆಗುತ್ತಿರುವುದು ಸಂತೋಷದ ವಿಷಯ. ಸೋಸಲೆ ಸಿದ್ದಪ್ಪ ಅವರು ಅಂಬೇಡ್ಕರ್ ಅವರ ಸಮಕಾಲೀನರು. ಎಲೆಮರೆಕಾಯಿಯಂತಿದ್ದ ಸೋಸಲೆ ಸಿದ್ದಪ್ಪ ಅವರ ಬಗ್ಗೆ ಪುಸ್ತಕ ಬರೆದು ಆಧುನಿಕ ಕನ್ನಡದ ಪರಿಗೆ ಸೇರಿರುವಂತೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ತಿಳಿಸಿದರು.
ಈ ಪುಸ್ತಕದಲ್ಲಿ 14 ಲೇಖನಗಳಿವೆ. ಹಲವು ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳ ಗುಚ್ಚವಿದೆ. 20ಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿರುವ ಪ್ರೊ.ಶೇಖರ್ ಅವರು ಗಾಂಧಿ ಭವನದ ನಿರ್ದೇಶಕರಾಗಿದ್ದರು. ಗಾಂಧಿ ಭವನಕ್ಕೆ ಹೊಸ ಮೆರುಗು ತಂದರು. ಗಾಂಧಿ ಪ್ರತಿಮೆ ಸ್ಥಾಪಿಸಿದರು. ವಿಚಾರ ಸಂಕಿರಣ ಹಾಗೂ ಹಲವು ಮೌಲ್ವಿಕ ಕೃತಿಗಳನ್ನು ಹೊರ ತಂದರು. ಗಾಂಧಿ ಕವಿ ಗೋಷ್ಠಿ ಕೂಡ ಮಾಡಿದರು. ಜಾನಪದ ಅಕಾಡೆಮಿ ಪುಸ್ತಕ ಪ್ರಶಸ್ತಿ ಹಾಗೂ ಕವಿ ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ ಕೂಡ ಇವರಿಗೆ ಸಿಕ್ಕಿದೆ. ಕಾವ್ಯ, ವಿಮರ್ಶೆ, ಪ್ರವಾಸ, ಜೀವನಚರಿತ್ರೆಯಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಎರಡು ವಿವಿಗಳಲ್ಲಿ ಇವರ ಕವನಗಳು ಪಠ್ಯವಾಗಿವೆ. ಬಹುಮುಖ ಕಾಳಜಿಯಿಂದ ಕೆಲಸ ಮಾಡಿದ್ದಾರೆ ಎಂದರು.
ಶಾಸಕ ಎನ್. ಮಹೇಶ್, ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ದನ್ (ಜನ್ನಿ), ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂದೀಶ್ ಹಂಚೆ, ಚಿಂತಕ ಜಿ.ವಿ. ಆನಂದ್ ಮೂರ್ತಿ, ಸೋಸಲೆ ಸಿದ್ದಪ್ಪ ಅವರ ಸೊಸೆ ಸಿದ್ದಮ್ಮ, ಕವಿ ಮಹದೇವ ಶಂಕರ್ ಪುರ, ಪ್ರೊ.ನರೇಂದ್ರ ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.