ಮನೆ ಅಪರಾಧ ಮಂಡ್ಯದಲ್ಲಿ ಮತಾಂತರಕ್ಕೆ ಯತ್ನ: ಐವರ ಬಂಧನ

ಮಂಡ್ಯದಲ್ಲಿ ಮತಾಂತರಕ್ಕೆ ಯತ್ನ: ಐವರ ಬಂಧನ

0

ಮಂಡ್ಯ(Mandya): ಮತಾಂತರಕ್ಕೆ ಯತ್ನಿಸಿದ ಆರೋಪದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಮದ್ದೂರು ತಾಲೂಕಿನ ಎಂ.ದೊಡ್ಡಿ ಸಮೀಪದ ಅಣ್ಣೂರು ಎಂಬಲ್ಲಿ ನಡೆದಿದೆ.

ಕುಮಾರ್ ನಾಯಕ್, ಸಮಂತ್, ವಿಜಯ್ ಗೌಡ, ಹೇಮಂತ್ ಕುಮಾರ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.

ಈ ಯುವಕರು ಚರ್ಚ್​ ಮುಂದೆ ನಿಂತು ಕರಪತ್ರ ಹಂಚುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ಮೆಣಸಕೆರೆ ಗ್ರಾಮದ ಶಿವರಾಮ ಎಂಬವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಪಡಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಯುವಕರ ವಿರುದ್ದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ವಿಚಾರಣೆ ವೇಳೆ ಮತಾಂತರಕ್ಕೆ ಯತ್ನಿಸಿರುವ ಬಗ್ಗೆ ಯುವಕರು ಒಪ್ಪಿಕೊಂಡಿದ್ದಾರೆ.