ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಅಡಿಯಲ್ಲಿ ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ ಈ ಕುರಿತಂತೆ ಆರೋಪಿ ಯುವಕ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ನ್ನು ರದ್ದುಪಡಿಸಿದೆ.
ಯುವತಿ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಕೆ.ಆರ್ ಪುರ ನಿವಾಸಿ ವೆಂಕಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ತೀರ್ಪಿನಲ್ಲಿ, ಅರ್ಜಿದಾರ ವ್ಯಕ್ತಿ ಯುವತಿಗೆ ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಆದರೆ, ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ವಂಚನೆ ಎನ್ನಲಾಗದು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 415ರಲ್ಲಿ ವಂಚನೆ ಕುರಿತು ನೀಡಿರುವ ವ್ಯಾಖ್ಯಾನದ ವ್ಯಾಪ್ತಿಗೆ ಮದುವೆ ಭರವಸೆ ಮುರಿಯುವುದನ್ನು ಸೇರಿಸಲಾಗದು. ಮೋಸ ಮಾಡುವ ಉದ್ದೇಶದಿಂದಲೇ ಒಪ್ಪಂದ ಮಾಡಿಕೊಂಡು ಬಳಿಕ ಅದನ್ನು ಉಲ್ಲಂಘಿಸಿದಾಗ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಬಹುದು.
ಆದರೆ, ಅರ್ಜಿದಾರ ವ್ಯಕ್ತಿ ಮೋಸ ಮಾಡುವ ಉದ್ದೇಶದಿಂದಲೇ ಹೀಗೆ ಮಾಡಿದ್ದಾನೆ ಎಂಬುದನ್ನು ಯುವತಿ ತೋರಿಸಿಲ್ಲ ಎಂದು ಅಭಿಪ್ರಾಯಪಟ್ಟು ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಪಡಿಸಿ ಆದೇಶಿಸಿದೆ.
ಹಿನ್ನೆಲೆ: 2020ರ ಮೇ 5ರಂದು ಬೆಂಗಳೂರಿನ ರಾಮಮೂರ್ತಿ ನಗರದ ಯುವತಿ ಕೆಆರ್ ಪುರಂ ನಿವಾಸಿಗಳಾದ ವೆಂಕಟೇಶ್ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ, ತಾನು ಹಾಗೂ ವೆಂಕಟೇಶ್ ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಆತ ಮದುವೆಯಾಗುವ ಭರವಸೆ ನೀಡಿದ್ದ. ಇದೀಗ ತನಗೆ ವಂಚಿಸಿ ಬೇರೊಂದು ಮದುವೆಯಾಗಿದ್ದಾನೆ. ಇದರಲ್ಲಿ ಆತನ ಕುಟುಂಬ ಸದಸ್ಯರ ಪಾತ್ರವೂ ಇದೆ. ಆದ್ದರಿಂದ ವೆಂಕಟೇಶ್ ಮತ್ತವರ ಕುಟುಂಬಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದಿದ್ದರು.
ಯುವತಿಯ ದೂರಿನ ಮೇರೆಗೆ ರಾಮಮೂರ್ತಿ ನಗರ ಠಾಣೆ ಪೊಲೀಸರು ವೆಂಕಟೇಶ್ ಮತ್ತು ಆವರ ಕುಟುಂಬ ಸದಸ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420, 506 ಹಾಗೂ 34ರ ಅಡಿ ಎಫ್ಐಆರ್ ದಾಖಲಿಸಿದ್ದರು. ಆ ಬಳಿಕ ವೆಂಕಟೇಶ್ ಹಾಗೂ ಆತನ ಕುಟುಂಬ ಸದಸ್ಯರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.