ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಪ್ರತಿವರ್ಷ ಸುಮಾರು 25 ಹಳ್ಳಿಗಳ ಜಮೀನು ಹಾಳುಗೆಡವುವ ಘಗ್ಗರ್ ನದಿ ಪ್ರವಾಹದ ಸಮಸ್ಯೆ ಸರಿಪಡಿಸಲು ವಿಫಲವಾದ ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
[ಮೂನಾಕ್ ನಗರ ಪಂಚಾಯತ್ ಮತ್ತು ಪಂಜಾಬ್ ಸರ್ಕಾರ ನಡುವಣ ಪ್ರಕರಣ].
ಸಮಸ್ಯೆ ಪರಿಹರಿಸಲು ಪುಣೆಯ ತಜ್ಞ ಸಂಸ್ಥೆಯೊಂದು ನೀಡಿದ್ದ ವರದಿ ಜಾರಿಗೆ ತರಲು ವಿಫಲವಾದ ಎರಡೂ ರಾಜ್ಯಗಳ ಬಗ್ಗೆ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎಂ ಎಂ ಸುಂದರೇಶ್ ಅವರಿದ್ದ ವಿಭಾಗೀಯ ಪೀಠ ಬೇಸರ ವ್ಯಕ್ತಪಡಿಸಿದೆ.
“ಶಿಫಾರಸು ಜಾರಿಯ ಪ್ರಗತಿ ಕುರಿತು ಚರ್ಚಿಸಲು ಸಂಬಂಧಪಟ್ಟ ಭಾಗೀದಾರರು ಪ್ರತಿ ನಾಲ್ಕು ವಾರಗಳಿಗೊಮ್ಮೆ ಸಭೆ ಸೇರಬೇಕೆಂದು 2018ರಲ್ಲಿ ತಾನು ಆದೇಶ ನೀಡಿದ್ದರೂ ರಾಜ್ಯ ಸರ್ಕಾರಗಳು ಅದಕ್ಕೆ ಸ್ಪಂದಿಸದೇ ಇರುವುದು ಅತ್ಯಂತ ದುರದೃಷ್ಟಕರ” ಎಂದು ನವೆಂಬರ್ 9ರಂದು ನೀಡಿದ ಆದೇಶದಲ್ಲಿ ಪೀಠ ತಿಳಿಸಿದೆ.
ಹೀಗಾಗಿ ಶಿಫಾರಸುಗಳ ಜಾರಿ ಇರಲಿ, ಒಂದು ಅಫಿಡವಿಟ್ ಸಲ್ಲಿಸಲು ಕೂಡ ವಿಫಲವಾಗಿರುವ ಎರಡೂ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ನ. 15ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸಮನ್ಸ್ ನೀಡಿತು.
“ಹರ್ಯಾಣ ಸರ್ಕಾರ ವರದಿಯೊಂದನ್ನು ಸಲ್ಲಿಸಿದ್ದರೂ ಅದು ತೃಪ್ತಿಕರವಾಗಿಲ್ಲ. ಪಂಜಾಬ್ ಸರ್ಕಾರ ವರದಿ ಸಲ್ಲಿಸುವ ಗೊಡವೆಗೇ ಹೋಗಿಲ್ಲ. ಇದು ಘಗ್ಗರ್ ಪ್ರವಾಸ ಸಮಸ್ಯೆ ನಿಭಾಯಿಸುವ ಬಗ್ಗೆ ಸರ್ಕಾರಗಳು ಗಂಭೀರವಾಗಿರುವ ರೀತಿ. ಪಂಜಾಬ್ ಮತ್ತು ಹರ್ಯಾಣ ಸರ್ಕಾರಗಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಪ್ರೀಂ ಕೋರ್ಟ್’ನ ಆದೇಶಕ್ಕೆ ಯಾವುದೇ ಗೌರವ ದೊರೆತಿಲ್ಲ” ಎಂದು ಅದು ಕಿಡಿಕಾರಿದೆ.