ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ. ಕೋಲಾರದವರು ಬಯಸಿದರೆ ಕೋಲಾರ, ವರುಣದವರು ಬಯಸಿದರೆ ವರುಣದಲ್ಲಿ ಸ್ಪರ್ಧಿಸುತ್ತೇನೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ನಗರದಲ್ಲಿಂದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸ್ಪರ್ಧೆ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಿದ್ಧರಾಮಯ್ಯ, ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದೆ ಎಂದರು.
ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಗರದಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರೂ ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು ಯಾವಾಗ ? 1996 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು. ನಾನು ಅಷ್ಟೊತ್ತಿಗೆ ಚುನಾವಣೆ ಗೆದ್ದಿರಲಿಲ್ವಾ. ನಾನು ಹೋಗದ ಕಾರಣ ಸಿದ್ದರಾಮಯ್ಯ ಗೆದ್ದರು ಎಂಬ ಮಾತುಗಳಲ್ಲಿ ಅರ್ಥ ಇಲ್ಲಾ. ಮತ ಹಾಕಿದ ಮತದಾರರಿಗೆ ಮಾಡಿದ ಅವಮಾನವಿದು ಎಂದು ಕಿಡಿಕಾರಿದರು.
ಶಾಸಕ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರವೇ ಇದರ ಪರವಾಗಿ ಇದೆ. ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಇವರೆಲ್ಲ ಇದರ ಭಾಗ. ಸಂವಿಧಾನದ 19ನೇ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಭಯ ಹುಟ್ಟಿಸುವ ಮೂಲಕ ಬಿಜೆಪಿಯವರು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.