ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್ಎ) ಅಡಿ ತಾನು ದಾಖಲಿಸಿರುವ ಪ್ರಕರಣಗಳಲ್ಲಿ ಹಾಲಿ ಮತ್ತು ಮಾಜಿಯಾದ 51 ಸಂಸದರು, 71 ಶಾಸಕರು ಆರೋಪಿಗಳಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ’ಗೆ ಸಲ್ಲಿಸಿದ ಸ್ಥಿತಿಗತಿ ವರದಿಯಲ್ಲಿ ಹೇಳಿದೆ.
[ಅಶ್ವಿನಿ ಕುಮಾರ್ ಉಪಾಧ್ಯಾಯ ಮತ್ತು ಭಾರತ ಸರ್ಕಾರ ನಡುವಣ ಪ್ರಕರಣ].
ಅವರಲ್ಲಿ ಎಷ್ಟು ಮಂದಿ ಹಾಲಿ ಸಂಸದರು/ಶಾಸಕರು ಮತ್ತು ಎಷ್ಟು ಮಂದಿ ಮಾಜಿ ಸಂಸದರು/ಶಾಸಕರು ಎಂಬುದನ್ನು ವರದಿ ಸ್ಪಷ್ಟಪಡಿಸಿಲ್ಲ. ಸಿಬಿಐ ಸಲ್ಲಿಸಿರುವ ಇದೇ ರೀತಿಯ ವರದಿಯಲ್ಲಿ ಹಾಲಿ ಮತ್ತು ಮಾಜಿ ಸಂಸದರು ಮತ್ತು ಶಾಸಕರ ವಿರುದ್ಧ ಒಟ್ಟು 121 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ಹೇಳಲಾಗಿದೆ. ಸಿಬಿಐ ಪ್ರಕರಣಗಳಲ್ಲಿ ಹೆಸರಿರುವ ಸಂಸದರ ಸಂಖ್ಯೆ 51. ಅವರಲ್ಲಿ 14 ಮಂದಿ ಹಾಲಿ ಸದಸ್ಯರು 37 ಮಂದಿ ಮಾಜಿ ಸದಸ್ಯರು ಹಾಗೂ 5 ಮಂದಿ ಮೃತಪಟ್ಟಿದ್ದಾರೆ.
ಅದೇ ರೀತಿ, 112 ಶಾಸಕರು ಸಿಬಿಐನ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ 34 ಮಂದಿ ಅಧಿಕಾರರೂಢರಾಗಿದ್ದು, 78 ಮಾಜಿ ಸದಸ್ಯರು ಇದ್ದಾರೆ. ಪ್ರಕರಣ ಎದುರಿಸುತ್ತಿದ್ದ 9 ಮಂದಿ ಮೃತಪಟ್ಟಿದ್ದಾರೆ. ಇನ್ನು ಸಿಬಿಐ ಶಾಸಕರ ವಿರುದ್ಧ ತನಿಖೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ 37.
ಸಿಬಿಐ ಮತ್ತು ಇಡಿ ವರದಿಯಲ್ಲಿ ಉಲ್ಲೇಖಿಸಲಾದ ಈ ಅಂಕಿಅಂಶಗಳನ್ನು ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸುಪ್ರೀಂ ಕೋರ್ಟ್’ಗೆ ಸಲ್ಲಿಸಿದ ಮತ್ತೊಂದು ವರದಿಯಲ್ಲಿ ವಿವರವಾಗಿ ವಿವರಿಸಲಾಗಿದೆ.
ಜನಪ್ರತಿನಿಧಿಗಳ ವಿರುದ್ಧ ವಿಚಾರಣೆಗೆ ಬಾಕಿ ಇರುವ ಮತ್ತು ಮಂಜೂರಾತಿಗೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಹಾಗೂ ವಿಚಾರಣೆಗೆ ವಿಳಂಬವಾಗುತ್ತಿರುವದಕ್ಕೆ ಕಾರಣಗಳನ್ನು ನೀಡುವಂತೆ ಅಮಿಕಸ್ ವಿಜಯ್ ಅವರನ್ನು ನ್ಯಾಯಾಲಯ ಕೇಳಿತ್ತು. ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ತ್ವರಿತ ವಿಚಾರಣೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ವಿವರ ಕೇಳಿತ್ತು.
ಘೋರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಸಂಸದ ಅಥವಾ ಶಾಸಕತ್ವದಿಂದ ಅನರ್ಹಗೊಳಿಸುವ ಅವಧಿಯನ್ನು ಶಿಕ್ಷೆಯ ನಂತರ ಬಿಡುಗಡೆಯಾದ ಆರು ವರ್ಷಗಳ ಅವಧಿಗೆ ಮಾತ್ರ ಸೀಮಿತಗೊಳಿಸುವ ಜನಪ್ರತಿನಿಧಿ ಕಾಯಿದೆಯ ನಿಯಮಾವಳಿಯ ಸಾಂವಿಧಾನಿಕ ಸಿಂಧುತ್ವವನ್ನು ಅರ್ಜಿ ಪ್ರಶ್ನಿಸಿದೆ.