ಮನೆ ರಾಜಕೀಯ ಸಿದ್ದರಾಮಯ್ಯ ಸರ್ವಜ್ಞ ಅಲ್ಲ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ ಸರ್ವಜ್ಞ ಅಲ್ಲ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

0

ಶಿವಮೊಗ್ಗ(Shivamogga):  ಸಿದ್ದರಾಮಯ್ಯ ಸರ್ವಜ್ಞ ಅಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಶೇ.10 ರಷ್ಟು ಮೀಸಲಾತಿಯನ್ನು ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಅವರು  ತಮ್ಮನ್ನು ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಮೀಸಲಾತಿ ಬಗ್ಗೆ ಬಿಜೆಪಿ ಸಾಮಾಜಿಕ ನ್ಯಾಯದ ಕಳಕಳಿ ತೋರಿದೆ.  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ವಾಗತ ಮಾಡಿದ್ದಾರೆ. ಆದರೆ ಸಿದ್ಧರಾಮಯ್ಯ ಮಾತ್ರ ಇದನ್ನು ಟೀಕೆ ಮಾಡುತ್ತಾರೆ.  ಬಡವರ ಮೇಲೆ ನಿಮಗೆ ಎಷ್ಟು ಕಾಳಜಿ ಎಂದು ಸ್ಪಷ್ಟಪಡಿಸಿ. ಕೇವಲ ಬಡವರ ಬಗ್ಗೆ ಭಾಷಣ ಮಾಡಿದರೇ  ಪ್ರಯೋಜವಿಲ್ಲ. ಮಾಜಿ ಸಿಎಂ ಸಿದ್ಧರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಬೇಕು ಎಂದು ಹರಿಹಾಯ್ದರು.

ಡಿ.ಕೆ.ಶಿವಕುಮಾರ್ ಅವರ ಆದೇಶವನ್ನ ಸಿದ್ಧರಾಮಯ್ಯ ಪಾಲಿಸುತ್ತಿಲ್ಲ ಚುನಾವಣೆಗೆ  ಕ್ಷೇತ್ರವಿಲ್ಲದೇ ಒದ್ದಾಡುತ್ತಿದ್ದಾರೆ. ಸಿದ್ಧರಾಮಯ್ಯಗೆ ರಾಜಕೀಯ ಬದ್ಧತೆ ಇಲ್ಲ ಎಂದು ನುಡಿದರು.