ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಹೊಸ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕೆ ಬೆಂಗಳೂರು ಕೇಂದ್ರ ಸ್ಥಾನದಂತಿದ್ದು, ಆವಿಷ್ಕಾರ ಸೂಚ್ಯಂಕದಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.
ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗದ ಉದ್ಘಾಟನಾ ಸಮಾರಂಭದಲ್ಲಿ ವರ್ಚ್ಯುಯಲ್ ಆಗಿ ಭಾಗವಹಿಸಿ ಮಾತನಾಡಿದ ಅವರು, ಆವಿಷ್ಕಾರ ಕಾರಣಗಳಿಂದಾಗಿಯೇ ಜಗತ್ತಿನ ಜನರು ಬೆಂಗಳೂರಿನತ್ತ ನೋಡುತ್ತಿದ್ದಾರೆ ಎಂದರು.
ಭಾರತೀಯ ಯುವಜನರು ಈಗ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಫಿನ್ ಟೆಕ್ ಉದ್ಯಮಗಳನ್ನು ಮುನ್ನಡೆಸುತ್ತಿದ್ದಾರೆ. _ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತವು 2015ರಲ್ಲಿ 81ನೇ ಸ್ಥಾನದಲ್ಲಿತ್ತು. ಈಗ 40ನೇ ಸ್ಥಾನಕ್ಕೆ ಏರಿದೆ. ನವೋದ್ಯಮಗಳ ಸಂಖ್ಯೆಯಲ್ಲಿ ಭಾರತವು ಜಗತ್ತಿನಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಮೋದಿ ಹೇಳಿದರು.
ಕೇಂದ್ರ ಸರ್ಕಾರವು ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ನಿರಂತರ ಬೆಂಬಲ ನೀಡುತ್ತಿದೆ. ಆಡಳಿತದಲ್ಲೂ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಿಕೊಳ್ಳಲಾಗುತ್ತದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಸಮಾನತೆ ತರಲು ಮತ್ತು ಜನರ ಸಶಕ್ತೀಕರಣಕ್ಕೆ ತಂತ್ರಜ್ಞಾನ ಅತ್ಯುತ್ತಮ ಸಾಧನ ಎಂದರು.