ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ರಾಜ್ಯದ ಬಿಜೆಪಿ ಸರ್ಕಾರ ಈಗ ಚುನಾವಣಾ ಕಳ್ಳತನಕ್ಕೆ ಮುಂದಾಗಿದೆ. ಜನರ ಮತವನ್ನೇ ಕಳ್ಳತನ ಮಾಡಲು ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿರುವ ಅವರು, ಮತದಾರರ ದಾಖಲೆಗಳು, ಅಂಕಿಅಂಶಗಳ ಕಳ್ಳತನ, ವಂಚನೆ ಮತ್ತು ಮಾಹಿತಿ ಸೋರುವಿಕೆ ಆಗಿದೆ. ಇದು ಚುನಾವಣಾ ವಂಚನೆಯಾಗಿದ್ದು ಮತದಾರರಿಂದ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಚುನಾವಣಾ ಸಂಸ್ಥೆಯ ಅಧಿಕಾರಿಗಳಂತೆ ಸೋಗು ಹಾಕಿದ್ದಾರೆ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಆ ಹಗರಣದಿಂದ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರ ಗುರುತು ಚೀಟಿ ತಿರುಚಿ ಬಹಳ ದೊಡ್ಡ ಹಗರಣ ನಡೆಸಿದೆ, ಇಲ್ಲಿ ಸಿಎಂ ಬಿಜೆಪಿ ಚುನಾವಣಾಧಿಕಾರಿಗಳು, ಅವರ ಸಂಪುಟದ ಸಚಿವರಾದ ಡಾ ಸಿ ಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದಕ್ಕೆ ಸಿಎಂ, ಬಿಜೆಪಿ ಸರ್ಕಾರ, ಬಿಬಿಎಂಪಿ ನೇರ ಹೊಣೆ. ಸಿಎಂ ಬೊಮ್ಮಾಯಿಯವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸಿಎಂ ಬೊಮ್ಮಾಯಿಯವರು ಬೆಂಗಳೂರಿನ ಉಸ್ತುವಾರಿ ಸಚಿವರು. ಅದರ ಮುಖ್ಯ ಆಯುಕ್ತರು ಬೆಂಗಳೂರಿನ ಚುನಾವಣಾ ಅಧಿಕಾರಿ. ಖಾಸಗಿ ಸಂಸ್ಥೆ ಚಿಲುಮೆ ಎಜುಕೇಶನ್ ಇನ್ಸ್ಟಿಟ್ಯೂಟ್ ಮತದಾರರ ಜಾಗೃತಿಗಾಗಿ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. ಅನುಮತಿ ಪಡೆದ ಮೇಲೆ ಅವರು ಬೂತ್ ಮಟ್ಟದ ಅಧಿಕಾರಿಗಳನ್ನು ಸೋಗು ಹಾಕುವ ಮೂಲಕ ಮತದಾರರ ಡೇಟಾವನ್ನು ಸಂಗ್ರಹಿಸುವ ವಂಚನೆ ಮಾಡಲಾಗುತ್ತಿದೆ ಎಂದು ಸುರ್ಜೆವಾಲಾ ಆರೋಪ ಮಾಡಿದ್ದಾರೆ.
ಬಿಜೆಪಿ ಸರ್ಕಾರ ವೋಟರ್ ಮಾಹಿತಿ ಕದಿಯುವ ಕೆಲಸ ಮಾಡಿದೆ. ತುಷಾರ್ ಗಿರಿನಾಥ್ ಬಿಬಿಎಂಪಿ ಚುನಾವಣಾಧಿಕಾರಿಯೂ ಆಗಿದ್ದಾರೆ. ಮಹದೇವಪುರದಲ್ಲಿ ಜಾಗೃತಿ ಮೂಡಿಸಲು ಚಿಲುಮೆ NGOಗೆ ಅನುಮತಿ ನೀಡಿದ್ದರು. ಈ ಕಂಪನಿ ಡಿಜಿಟಲ್ ಸಮೀಕ್ಷಾ ಎಂಬ ಮೊಬೈಲ್ ಆ್ಯಪ್ ಹೊಂದಿದೆ. ವೋಟರ್ ಡೇಟಾ ಸಂಗ್ರಹ ಮಾಡಿರುವುದು ಮೊದಲನೇ ಅಪರಾಧ. ಬೂತ್ ಮಟ್ಟದ ಅಧಿಕಾರಿಗಳು ಡೇಟಾ ಸಂಗ್ರಹ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಬಿಜೆಪಿ ಹಿಡಿತದಲ್ಲೇ ಇದೆ ಎಂದಿದ್ದಾರೆ.
ಸರ್ಕಾರ ಈ ಮಾಹಿತಿ ಕಲೆ ಹಾಕಲು ಚಿಲುಮೆ ಎಂಟರ್ ಪ್ರೈಸಸ್, DAP ಹೊಂಬಾಳೆ ಪ್ರೈವೇಟ್ ಲಿಮಿಟೆಡ್ ಗಳಿಗೆ ಜವಾಬ್ದಾರಿ ನೀಡಿದ್ದು, ಈ ಎರಡು ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ಒಬ್ಬರೇ ಆಗಿದ್ದಾರೆ. ಈ ಎರಡು ಸಂಸ್ಥೆಗಳು EVM ಪ್ರಿಪರೇಷನ್ ನ್ನು ಮಾಡುತ್ತೆ. ಓಟರ್ ಐಡಿ ಅಕ್ರಮದ ಹಿಂದೆ ಅಶ್ವತ್ಥ ನಾರಾಯಣ ಇದ್ದಾರೆ ಎಂದು ಹೆಸರು ಉಲ್ಲೇಖಿಸದೇ ಕೇವಲ ಕ್ಷೇತ್ರದ ಹೆಸರು ಹೇಳಿ ಅಶ್ವತ್ಥ ನಾರಾಯಣ ವಿರುದ್ದ ಸುರ್ಜೇವಾಲ ಆರೋಪ ಮಾಡಿದ್ದಾರೆ.
ಬೂತ್ ಲೆವೆಲ್ ಆಫಿಸರ್ ಅಂತ ಐಡಿ ಕಾರ್ಡ್ ನೀಡಲಾಗಿದೆ. ಓಟರ್ ಐಡಿಗಳಿಂದ ಸಂಗ್ರಹಿಸಿದ ಡೇಟಾವನ್ನು ಅವರು ಚುನಾವಣಾ ಕಮಿಷನ್ ಗೆ ಅಪ್ಲೋಡ್ ಮಾಡ್ತಿಲ್ಲ. ಖಾಸಗಿ ವ್ಯಕ್ತಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಕೃಷ್ಣಪ್ಪ ಹಾಗೂ ರವಿಕುಮಾರ್ ಇದರ ಕಿಂಗ್ ಪಿನ್. ಇವರು ಮಾಜಿ ಡಿಸಿಎಂ ಹಾಗೂ ಹಾಲಿ ಸಚಿವರಿಗೆ ಆತ್ಮೀಯರು. ಹಾಲಿ ಸಚಿವರು ಕಿಂಗ್ ಪಿನ್ ಕೃಷ್ಣಪ್ಪ ಜೊತೆಗೆ ಮಿಂಗಲ್ ಆಗಿದ್ದಾರೆ. ಹಾಗೂ ಮಲ್ಲೇಶ್ವರಂ ಕ್ಷೇತ್ರದ ಸಚಿವರಿಗೆ ಸಂಬಂಧಿಸಿದವರು ಕೃಷ್ಣಪ್ಪ ಎಂದರು.
ಈ ಕಂಪನಿ ಡಿಜಿಟಲ್ ಸಮೀಕ್ಷಾ ಎಂಬ ಮೊಬೈಲ್ ಆ್ಯಪ್ ಹೊಂದಿದೆ. ಓಟರ್ ಡೆಟಾ ಸಂಗ್ರಹ ಮಾಡಿರುವುದು ಮೊದಲನೇ ಅಪರಾಧ. ಬೂತ್ ಲೆವೆಲ್ ಆಫಿಸರ್ ನಿಂದ ಡೇಟಾ ಕಲೆಕ್ಟ್ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಬಿಜೆಪಿ ಹಿಡಿತದಲ್ಲೇ ಇದೆ. ಓಟರ್ ಮಾಹಿತಿ ಕದಿಯುವ ಕೆಲಸವನ್ನು ಬಿಬಿಎಂಪಿ ಹಾಗೂ ಬೊಮ್ಮಾಯಿ ಸರ್ಕಾರ ಮಾಡಿದೆ. ಅನುಭವವೇ ಇಲ್ಲದೇ ಚಿಲುಮೆ ಎನ್.ಜಿ.ಓ ಮನೆಮನೆಗೆ ಹೋಗಿ ಜಾಗೃತಿ ಮೂಡಿಸುತ್ತೇವೆ ಎನ್ನುತ್ತದೆ. ಹೊಂಬಾಳೆ ಪ್ರೈವೇಟ್ ಲಿಮಿಟೆಡ್ ಹಾಗೂ ಚಿಲುಮೆ ಎನ್.ಜಿಓ ದ ಪದಾಧಿಕಾರಿಗಳು ಎಲ್ಲರೂ ಒಂದೇ ಸಂಸ್ಥೆಗೆ ಸೇರಿದವರು ಎಂದು ಸುರ್ಜೇವಾಲ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.