ಮನೆ ರಾಜಕೀಯ ತಿ.ನರಸೀಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್’ಗಾಗಿ ಸುನೀಲ್ ಬೋಸ್​ ಅರ್ಜಿ

ತಿ.ನರಸೀಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್’ಗಾಗಿ ಸುನೀಲ್ ಬೋಸ್​ ಅರ್ಜಿ

0

ಮೈಸೂರು(Mysuru): ತಿ ನರಸೀಪುರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ತನಗೆ ಟಿಕೆಟ್ ನೀಡುವಂತೆ ಕೋರಿ ಮಾಜಿ‌ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್​ ಅರ್ಜಿ ಹಾಕಿದ್ದಾರೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ತಿ ನರಸೀಪುರ ಕ್ಷೇತ್ರದಿಂದ ನಾನು ಒಬ್ಬ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲು ಅರ್ಜಿ ಹಾಕಿದ್ದೇನೆ‌. ಹೈಕಮಾಂಡ್ ಅರ್ಜಿ ಹಾಕಲು ಸೂಚನೆ ನೀಡಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್​ ಆಕಾಂಕ್ಷಿಯಾಗಿರುವ ನನಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಹೀಗಾಗಿ, ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ. ಈಗಾಗಲೇ ಕ್ಷೇತ್ರದ ಜನರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಭರವಸೆಗಳಿಂದ ಬೇಸತ್ತಿದ್ದಾರೆ‌ ಎಂದರು‌.