ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಮಾತಿನ ಭರದಲ್ಲಿ ಆಕ್ಷೇಪಾರ್ಹ ಪದ ಬಳಕೆಯಾಗಿದೆ. ಈ ಬಗ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಸರ್ಕಾರ, ನ್ಯಾಯಾಲಯವು ಈ ಬಗ್ಗೆ ಗಮನಹರಿಸಬೇಕು ಎಂದು ಚಿಂತಕ ಪ. ಮಲ್ಲೇಶ್ ಆಗ್ರಹಿಸಿದರು.
ನಗರದಲ್ಲಿಂದು ಬ್ರಾಹ್ಮಣರ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿರುವ ಅವರು ಸ್ಪಷ್ಟನೆ ನೀಡಿದ್ದು, ನಾನು ಆ ಪದಗಳನ್ನು ಬಳಸಬಾರದಿತ್ತು. ಮಾತಿನ ಭರದಲ್ಲಿ ಆಕ್ಷೇಪಾರ್ಹ ಪದ ಬಳಕೆಯಾಗಿದೆ. ವಿಷಾದ ವ್ಯಕ್ತಪಡಿಸಿದ್ದೇನೆ ಎಂದರೆ, ನಾನು ಮಾತನಾಡಿದ್ದು ತಪ್ಪಾಗಿದೆ ಎಂದರ್ಥ. ಆದರೆ, ಇದೇ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ಹೋರಾಟವನ್ನು ಮಾಡುತ್ತೇವೆ ಎಂದು ಹೊರಟಿರುವುದು ಸರಿಯಾದುದಲ್ಲ ಎಂದು ಉತ್ತರಿಸಿದರು.
ದೇಶದಲ್ಲಿ ಬ್ರಾಹ್ಮಣ ಸಮುದಾಯವು ಶಿಕ್ಷಣ ಪಡೆದ ಬುದ್ಧಿವಂತರಲ್ಲವೇ? ಎಲ್ಲ ಕ್ಷೇತ್ರಗಳಲ್ಲಿ ಉನ್ನತಿ ಸಾಧಿಸಿರುವ ಸಮಾಜವು ಕೇವಲ ನನ್ನ ಮಾತಿನಿಂದ ಕೆಟ್ಟುಹೋಗುತ್ತದೆ ಎಂದು ಹೇಳಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.
ದೇವರ ಪರಿಕಲ್ಪನೆಯನ್ನೇ ಅವರು ಹುಟ್ಟುಹಾಕಿದ್ದಾರೆ. ದೇವರು ಎಲ್ಲಿದ್ದಾರೆ ಎಂಬುದನ್ನು ತೋರಿಸಲಿ? ನಾವು ದೇವರನ್ನೇ ಒಪ್ಪುವುದಿಲ್ಲ. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರಿಗೂ ದೇವರ ಬಗ್ಗೆ ಗೊತ್ತಾಗಿಲ್ಲ. ದೇವರನ್ನು ಸೃಷ್ಟಿಮಾಡಿ, ನಮ್ಮನ್ನು ಗುಲಾಮರನ್ನಾಗಿ ಮಾಡಿದ್ದಾರೆ. ಇದನ್ನು ಸಮಾಜವು ಅರ್ಥಮಾಡಿಕೊಳ್ಳಬೇಕು. ಎಲ್ಲವನ್ನೂ ಸಹಿಸಿಕೊಂಡಿದ್ದೇವೆ. ಶೂದ್ರರು ತಿರುಗಿಬಿದ್ದರೆ, ಅವರು ಎಲ್ಲಿರುತ್ತಾರೆ? ನಾವು ತಿರುಗಿಬಿದ್ದಿಲ್ಲ. ಮಾನವೀಯತೆಯೇ ಮುಖ್ಯ ಎಂದು ಈ ವೇಳೆ ತಿಳಿಸಿದರು.