ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru) : ಎಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿಯಲ್ಲಿ ವಾಸ್ತವ್ಯ ಹೂಡಲು, ಜನರ ಸಮಸ್ಯೆ ಆಲಿಸಲು ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಸ್ವಾಗತ ಕೋರಲಾಯಿತು.
ಶನಿವಾರ ಭೀಮನಕೊಲ್ಲಿಯಲ್ಲಿರುವ ತೋಟಗಾರಿಕೆ ಇಲಾಖೆಯ ತಾಳೆ ಬೆಳೆ ಉತ್ಕೃಷ್ಟ ಕೇಂದ್ರದ ಬಳಿ ಜಿಲ್ಲಾಡಳಿತದಿಂದ ಸಚಿವರಿಗೆ ಸ್ವಾಗತ ನೀಡಲಾಯಿತು.
ಜಿಲ್ಲಾಡಳಿತದಿಂದ ಭೀಮನಕೊಲ್ಲಿಯ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿರುವ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದ ಸ್ಥಳಕ್ಕೆ ಅಲಂಕೃತ ಟ್ರ್ಯಾಕ್ಟರ್’ನಲ್ಲಿ ಸಚಿವರನ್ನು ಅಧಿಕಾರಿಗಳು ಕರೆತಂದರು.
ನಂದಿ ಧ್ವಜ, ಡೋಲು, ಆದಿವಾಸಿಗಳ ತಂಡಗಳು ಸೇರಿದಂತೆ ವಿವಿಧ ಜಾನಪದ ಕಲಾತಂಡದವರು ಪಾಲ್ಗೊಂಡಿದ್ದರಿಂದ ಮೆರವಣಿಗೆಗೆ ಮೆರುಗು ಬಂದಿತು. ಅಲಂಕೃತ ಎತ್ತಿನಗಾಡಿಗಳು ಗಮನಸೆಳೆದವು.
ನಂತರ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಆವರಣದಲ್ಲಿ ವಿವಿಧ ಇಲಾಖೆಗಳಿಂದ ಹಾಕಿದ್ದ ಮಳಿಗೆಗಳನ್ನು ಉದ್ಘಾಟಿಸಿ ವೀಕ್ಷಿಸಿದರು.
ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು, ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.