ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಿತ್ರರಂಗದಿಂದ ಕೆಲಕಾಲ ದೂರ ಉಳಿದಿದ್ದ ನಟ ಕೋಮಲ್ ಕುಮಾರ್ ಈಗ ಮತ್ತೆ ‘ಕಾಲಾಯ ನಮಃ’ ಚಿತ್ರದ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರೀಕರಣ ಭರದಿಂದ ಸಾಗಿದ್ದು, ಆಸಿಯಾ ಫಿರ್ದೋಸಿ ಚಿತ್ರದ ನಾಯಕಿಯಾಗಿದ್ದಾರೆ. ಮತಿವಣನ್ ಈ ಚಿತ್ರದ ನಿರ್ದೇಶಕರು.
‘ಕಾಲಭೈರವ ದೇವರ ಭಕ್ತನಾದ ನನ್ನ ಸಿನಿಮಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿದೆ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿಮಾ ಸಾಗುತ್ತದೆ. ನನ್ನ ಪತ್ನಿ ಅನಸೂಯಾ ಈ ಚಿತ್ರದ ನಿರ್ಮಾಪಕರು. ಮತಿವಣನ್ ನಿರ್ದೇಶಿಸುತ್ತಿದ್ದಾರೆ. ನನ್ನ ಅಣ್ಣ ಜಗ್ಗೇಶ್ ಅವರ ಸಹಕಾರವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್, ತಿಲಕ್ ಹಾಗೂ ನನ್ನ ಅಣ್ಣ ಜಗ್ಗೇಶ್ ಅವರ ಪುತ್ರ ಯತಿರಾಜ್ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾನು ನಟಿಸಿರುವ 2020 ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರುತ್ತಿದೆ ಎಂದು ಕೋಮಲ್ ಕುಮಾರ್ ತಿಳಿಸಿದ್ದಾರೆ.
ನನಗೆ ಜ್ಯೋತಿಷ್ಯದ ಮೇಲೆ ನಂಬಿಕೆ ಇದೆ. ಕೆಲ ವರ್ಷಗಳ ಹಿಂದೆ ನನ್ನ ಅಣ್ಣ ಜಗ್ಗೇಶ್ ಜಾತಕ ನೋಡಿದರು. ನನಗೆ ಕೇತು ದೆಸೆ ನಡೆಯುತ್ತಿದೆ. ಹಾಗಾಗಿ ಹುಷಾರಾಗಿರಬೇಕು ಎಂದಿದ್ದರು. ಹಾಗಾಗಿ ಐದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದೆ. ಊರಿನ ದೇವರಾದ ಕಾಲಭೈರವನ ಉಪಾಸನೆ ಮಾಡುತ್ತಿದ್ದೆ. ಈಗ ‘ಕಾಲಾಯ ನಮಃ’ದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ಅವರು.
ಸುಚೀಂದ್ರ ಪ್ರಸಾದ್, ತಿಲಕ್ ತಾರಾಗಣದಲ್ಲಿದ್ದಾರೆ.