ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಜೈಪುರ: ಇಲ್ಲಿ ನ. 25ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) 68ನೇ ರಾಷ್ಟ್ರೀಯ ಸಮ್ಮೇಳನ ಆರಂಭವಾಗಲಿದೆ ಎಂದು ಎಬಿವಿಪಿ ತಿಳಿಸಿದೆ.
ಸಮ್ಮೇಳನವನ್ನು ಯೋಗ ಗುರು ಬಾಬಾ ರಾಮದೇವ್ ಉದ್ಘಾಟಿಸಲಿದ್ದು, ಸಮ್ಮೇಳನದ ಕೊನೆಯ ದಿನವಾದ ನವೆಂಬರ್ 27ರಂದು ಕೇಂದ್ರ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಭಾಗಿಯಾಗಲಿದ್ದಾರೆ.
ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹುಶಿಯಾರ್ ಸಿಂಗ್ ಮೀನಾ ಸಮ್ಮೇಳನ ಕುರಿತು ಮಾತನಾಡಿ, 18 ವರ್ಷಗಳ ಬಳಿಕ ಎಬಿವಿಪಿಯ ರಾಷ್ಟ್ರೀಯ ಸಮ್ಮೇಳನವು ಜೈಪುರದಲ್ಲಿ ಆಯೋಜನೆ ಆಗಿದೆ. ದೇಶದ ಎಲ್ಲೆಡೆಯಿಂದ ಎಬಿವಿಪಿಯ ಪದಾಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ನವೆಂಬರ್ 24ರಂದು ವಸ್ತುಪ್ರದರ್ಶನ ಏರ್ಪಡಿಸಲಾಗುವುದು. ಮರುದಿನ ರಾಮ್ದೇವ್ ಅವರು, ಜೆಇಸಿಆರ್’ಸಿ ವಿಶ್ವವಿದ್ಯಾಲಯದ ಆವರಣದಲ್ಲಿ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ನೀಡುವರು. 26ರಂದು, ರಾಜ್ಯದ ಭಿನ್ನ ಸಂಸ್ಕೃತಿ ಸಾರುವಂತಹ ಮೆರವಣಿಗೆಯನ್ನು ಅಗರ್ವಾಲ್ ಕಾಲೇಜಿನಿಂದ ಆಲ್ಬರ್ಟ್ ಹಾಲ್ವರೆಗೂ ಕೈಗೊಳ್ಳಲಾಗುವುದು. 27ರಂದು ‘ಯಶವಂತ್ ರಾವ್ ಕೇಲ್ಕರ್ ಯುವ ಪ್ರಶಸ್ತಿ’ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಂಘಟನೆಯ ಪದಾಧಿಕಾರಿಗಳಲ್ಲದೇ ಬೇರೆ ಬೇರೆ ರಾಜ್ಯಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ತಜ್ಞರು ಪಾಲ್ಗೊಳ್ಳಲಿದ್ದಾರೆ. ಇಂದಿನ ಶಿಕ್ಷಣದಲ್ಲಿರುವ ಸವಾಲುಗಳ ಕುರಿತು ಮತ್ತು ದೇಶದಲ್ಲಿರುವ ಇತರ ಪ್ರಮುಖ ಸಮಸ್ಯೆಗಳ ಕುರಿತು ವಿಷಯ ತಜ್ಞರು ಚರ್ಚೆ ನಡೆಸಲಿದ್ದಾರೆ. ದೇಶಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸವಾಲುಗಳ ಕುರಿತು ಚರ್ಚಿಸಲು ಈ ಸಮ್ಮೇಳನವು ರಚನಾತ್ಮಕ ವೇದಿಕೆಯಾಗಿದೆ ಎಂದು ಮೀನಾ ತಿಳಿಸಿದರು.