ಮನೆ ರಾಜ್ಯ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು

0

ನೆಲಮಂಗಲ(Nelamangala): ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ದರೋಡೆಕೋರ ಯೋಗಾನಂದ ಫೈರಿಂಗ್ ನಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಕರಣವೊಂದರಲ್ಲಿ ಯೋಗಾನಂದ ಬಂಧವಾಗಿತ್ತು. ಆರೋಪಿಯನ್ನು ಕೃತ್ಯದ ಸ್ಥಳಕ್ಕೆ ಪೊಲೀಸರು ಕರೆದೊಯ್ಯುತ್ತಿದ್ದರು.

ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಕಾನ್ಸ್‌ಟೇಬಲ್ ಹನುಮಂತ ಹಿಪ್ಪರಗಿ ಕೈ ಮೇಲೆ ಹಾಲೋ‌ಬ್ರೀಕ್ಸ್’​ನ್ನು ಯೋಗಾನಂದ್ ಎತ್ತಿಹಾಕಿದ್ದು, ಆತ್ಮರಕ್ಷಣೆಗಾಗಿ ನೆಲಮಂಗಲ ಟೌನ್ ಪೊಲೀಸ್ ಇನ್ಸ್​ಪೆಕ್ಟರ್ ಶಶಿಧರ್‌ ಆರೋಪಿ ಯೋಗಾನಂದ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಾಲಿಗೆ‌ ಗುಂಡು ತಗುಲಿ ಗಾಯಗೊಂಡ ಆರೋಪಿ ಯೋಗನಾಂದಗೆ ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಆಸ್ಪತ್ರೆಗೆ ಬೆಂಗಳೂರು ಗ್ರಾಮಾಂತರ ಎಸ್’​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.