ಮನೆ ಸುದ್ದಿ ಜಾಲ ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ: ಪ್ರಮೋದ್ ಮುತಾಲಿಕ್

ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ: ಪ್ರಮೋದ್ ಮುತಾಲಿಕ್

0

ಮೈಸೂರು(Mysuru): ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಆದ್ದರಿಂದ ನಗರದಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಶ್ರೀರಾಮ‌ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರಕ್ಕಿಂದು ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಉಗ್ರರು ಸ್ವೇಚ್ಛೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗುತ್ತಿದೆ. ಎಂದು ಒತ್ತಾಯಿಸಿದರು.

ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿ, ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ‌ ಎಂದರು.

ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿಸಿ: ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ, ಪ್ರೀತಿ ಮಾಡಬೇಕು. ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ. ನಿಮ್ಮ ಜತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ ಎಂದು ಹೇಳಿದರು.

ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಲವ್ ಜಿಹಾದ್ ವಿರುದ್ಧ ಮೊದಲು ಧ್ವನಿ ಎತ್ತಿದವನೇ ನಾನು. 3 ಸಾವಿರ ಹೆಣ್ಣು ಮಕ್ಕಳನ್ನು ಲವ್ ಜಿಹಾದ್​ನಿಂದ ನಾವು ಪಾರು ಮಾಡಿದ್ದೇವೆ. ಲವ್ ಜಿಹಾದ್ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು‌ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನಿಗಿಂತ ಬಿಜೆಪಿಗೆ ಹೆಚ್ಚು ಬೈದವನು ನಾನು: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಬೈಯುತ್ತಿಲ್ಲ. ನಾನು ಎಂದೂ ಬಿಜೆಪಿ ಪರವಾಗಿ ಮಾತನಾಡಿಲ್ಲ. ಬಿಜೆಪಿ ಪರವಾಗಿ ಸಾಫ್ಟ್ ಕಾರ್ನರ್ ತೋರಿಲ್ಲ. ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಬೈದವನು ನಾನು. ಬಿಜೆಪಿಯನ್ನು ಮೊದಲಿನಿಂದಲೂ ಟೀಕಿಸುತ್ತ ಬಂದಿದ್ದೇನೆ. ಕೇವಲ ಹಿಂದುತ್ವದ ವಿಚಾರವಾಗಿ ಗಟ್ಟಿ ಧ್ವನಿಯಲ್ಲಿ ಮಾತಾಡುತ್ತಿದ್ದೀನಿ ಎಂದು ಸ್ಪಷ್ಟಪಡಿಸಿದರು.

ಮಂಗಳೂರಲ್ಲು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ ಧರಿಸಿದ ವಿಚಾರವಾಗಿ ಮಾತನಾಡಿ, ಉಗ್ರಗಾಮಿಗಳು ತಾವು ಮಾಡುವ ಕೃತ್ಯಗಳನ್ನು ಹಿಂದೂಗಳ ಮೇಲೆ ಹಾಕಲು ಈ ಕುತಂತ್ರ ಮಾಡುತ್ತಿದ್ದಾರೆ. ಹಿಂದೂಗಳು ಯಾವತ್ತೂ ಭಯೋತ್ಪಾದನಾ ಚಟುವಟಿಕೆ ಮಾಡಲ್ಲ. ಭಾರತದಲ್ಲಿ ಮಾತ್ರ ಅಲ್ಲ,‌ ಇಡೀ ವಿಶ್ವದಲ್ಲೇ ಜಗಜ್ಜಾಹೀರಾಗಿರೋದು ಇಸ್ಲಾಂ ಭಯೋತ್ಪಾದನೆ ಮಾತ್ರ. ಹಾಗಾಗಿ ಇಸ್ಲಾಮಿಕ್ ಭಯೋತ್ಪಾದನೆ ಮಟ್ಟ ಹಾಕಬೇಕು ಎಂದು ಹೇಳಿದರು.