ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ಪ್ರಭಾವೀ ವ್ಯಕ್ತಿಗಳಿಗೆ ಲೈಂಗಿಕ ಬಯಕೆ ತೀರಿಸಿಕೊಳ್ಳಲೂ ವ್ಯವಸ್ಥೆ ಮಾಡಿಕೊಡುವ ಬಗ್ಗೆ ತಮಗೆ ಗೊತ್ತಿದೆ ಎಂದು ಬಂದೀಖಾನೆಯ ಮಾಜಿ ಕಾನೂನು ಅಧಿಕಾರಿ ಸುನೀಲ್ ಗುಪ್ತಾ ಗಂಭೀರ ಆರೋಪ ಮಾಡಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ಜೈಲಿನೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸಿಸಿಟಿವಿ ವಿಡಿಯೊಗೆ ಸಂಬಂಧಿಸಿ ಗುಪ್ತಾ ಪ್ರತಿಕ್ರಿಯಿಸಿದ್ದಾರೆ.
ತಿಹಾರ್ ಜೈಲು ರಾಷ್ಟ್ರದ ಅತಿದೊಡ್ಡ ಬಂದೀಖಾನೆ ಎಂದು ಗುರುತಿಸಿಕೊಂಡಿದ್ದು, ಸುನೀಲ್ ಗುಪ್ತಾ ಅವರು 1981 ರಿಂದ 2016ರ ವರೆಗೆ ತಿಹಾರ್ ಜೈಲಿನಲ್ಲಿ ಕಾನೂನು ಅಧಿಕಾರಿ ಮತ್ತು ವಕ್ತಾರರಾಗಿ ಕೆಲಸ ಮಾಡಿದ್ದಾರೆ. ನಿವೃತ್ತಿಯಾದ ಒಂದು ವರ್ಷದ ಬಳಿಕ ‘ಬ್ಲ್ಯಾಕ್ ವಾರೆಂಟ್’ ಎಂಬ ಹೆಸರಿನ ಪುಸ್ತಕವನ್ನು ಬರೆದಿದ್ದಾರೆ. ಅದರಲ್ಲಿ ಪ್ರಭಾವೀ ಕೈದಿಗಳು ಜೈಲಿನೊಳಗೆ ಕಾನೂನು ಮುರಿದು ಹೇಗೆ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂಬ ಬಗ್ಗೆ ವಿವರಿಸಿದ್ದಾರೆ.
ಬಂಧಿತ ಪ್ರಭಾವೀ ವ್ಯಕ್ತಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳು ಮತ್ತು ವಿಶೇಷ ಉಪಚಾರಗಳು ಜೈಲಿನ ಆವರಣದಲ್ಲೇ ಸಿಗುತ್ತವೆ. ಇಂತಹ ಕೃತ್ಯಗಳಲ್ಲಿ ಜೈಲಿನ ಅಧಿಕಾರಿಗಳು ಮತ್ತು ಸಹಕೈದಿಗಳು ಭಾಗಿಯಾಗಿರುತ್ತಾರೆ. ತಾನು ವರದಿ ಮಾಡಿದ ಕೆಲವು ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಗುಪ್ತಾ ಹೇಳಿದರು.
ನನ್ನ ಅವಧಿಯಲ್ಲಿ, ಪ್ರಭಾವಿ ವ್ಯಕ್ತಿಗಳು ಲೈಂಗಿಕ ಬಯಕೆಗಳನ್ನು ಪೂರೈಸುವಂತೆ ಬೇಡಿಕೆ ಇಡುತ್ತಿದ್ದುದನ್ನು ನೋಡಿದ್ದೇನೆ. ತಮ್ಮ ಕಾಮನೆಗಳನ್ನು ತೀರಿಸಿಕೊಳ್ಳಲು ಸಣ್ಣ ಪ್ರಾಯದ ಕೈದಿಗಳನ್ನು ಬಳಸಿಕೊಳ್ಳುವುದನ್ನು ಗಮನಿಸಿದ್ದೇನೆ. ಸಹಕೈದಿಗಳೊಂದಿಗೆ ಸಹಮತದಿಂದ ಅಥವಾ ಜೈಲಿನ ಅಧಿಕಾರಿಗಳ ಸಹಾಯದಿಂದ ಲೈಂಗಿಕ ಬಯಕೆಗಳನ್ನು ತೀರಿಸಿಕೊಳ್ಳುತ್ತಾರೆ ಎಂದು ಗುಪ್ತಾ ಬೇಸರಿಸಿದರು.
ಗುಪ್ತಾ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ತಿಹಾರ್ ಜೈಲಿನ ಹಾಲಿ ವಕ್ತಾರ ಧೀರಜ್ ಮಥುರ್ ನಿರಾಕರಿಸಿದ್ದಾರೆ.
ಸಣ್ಣ ವಯಸ್ಸಿನ ಕೈದಿಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಚಾರವಾಗಿ ಸಂಜಯ್ ಸೂರಿ ಮತ್ತು ದೆಹಲಿ ಆಡಳಿತದ ನಡುವೆ ಕಾನೂನು ಹೋರಾಟಕ್ಕೆ ಸಂಬಂಧಿಸಿ 1987ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಗಮನಾರ್ಹ.