ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಸೋಮವಾರ) ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಸಲುವಾಗಿ ನಂಜನಗೂಡು ಪಟ್ಟಣದ ಮಾರ್ಗವಾಗಿ ಸಂಚರಿಸುವ ಭಾರಿ ವಾಹನಗಳ ಸಂಚಾರ ಮಾರ್ಗವನ್ನು ಬೆಳಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಬದಲಾವಣೆ ಮಾಡಲಾಗಿದೆ.
ಮುಖ್ಯಮಂತ್ರಿಗಳು ಇಂದು ನಂಜನಗೂಡು ಪಟ್ಟಣಕ್ಕೆ ಆಗಮಿಸಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಆಯೋಜಿಸಿರುವ ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆದ್ದರಿಂದ ಚಾಮರಾಜನಗರದ ಕಡೆಯಿಂದ ಮೈಸೂರಿಗೆ ಹೋಗುವ ಬಸ್ಸು, ಲಾರಿ, ಹಾಗೂ ಇತರೆ ಭಾರಿ ವಾಹನಗಳು ಗೋಳೂರು ಕ್ರಾಸ್-ಟಿ ನರಸೀಪುರ ರಸ್ತೆ-ಸುತ್ತೂರು ಹೊಸಕೋಟೆ ಮೂಲಕ ಮೈಸೂರಿಗೆ ಹೋಗಲು ಸೂಚಿಸಲಾಗಿದೆ.
ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ಬಸ್ಸು, ಲಾರಿ, ಹಾಗೂ ಇತರೆ ಭಾರಿ ವಾಹನಗಳು ಟಿ.ನರಸೀಪುರ-ಮೂಗೂರು-ಸಂತೆಮರಳ್ಳಿ ಮಾರ್ಗವಾಗಿ ಚಾಮರಾಜನಗರಕ್ಕೆ ಸಂಚರಿಸಬೇಕು.
ಇನ್ನುಳಿದಂತೆ ಬೈಕ್ ಕಾರಿನಂತಹ ಹಾಗೂ ಇತರೆ ಲಘು ವಾಹನಗಳು ದಿನನಿತ್ಯದ ಮಾರ್ಗದಲ್ಲೇ ಸಂಚರಿಸಬಹುದಾಗಿರುತ್ತದೆ.