ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ರಾಜ್ಯ ಸರ್ಕಾರ 108 ಪೊಲೀಸ್ ಇನ್ಸ್’ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯು ರಾಜ್ಯ ಗುಪ್ತವಾರ್ತೆ, ಸಿಐಡಿ, ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿವಿಧ ಪೊಲೀಸ್ ಇನ್ಸ್’ಪೆಕ್ಟರ್’ಗಳನ್ನು ವರ್ಗಾವಣೆಗೊಳಿಸಿದೆ.
ಸಿಸಿಬಿ, ಕೆಎಸ್’ಆರ್’ಪಿಟಿಎಸ್, ಸಿಇಎನ್, ಸೈಬರ್ ಕ್ರೈ ಪೊಲೀಸ್ ಠಾಣೆಯ ಇನ್ಸ್’ಪೆಕ್ಟರ್’ಗಳನ್ನು ಎತ್ತಂಗಡಿ ಮಾಡಿ ಆದೇಶಿಸಿದ್ದಾರೆ.
ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
ಬೆಂಗಳೂರು ನಗರದಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕೆಲ ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಡಾ.ಹರೀಶ್ ಕುಮಾರ್ ಕೆ ಅವರಿಗೆ ಬಿಬಿಎಂಪಿಯ ವಿಶೇಷ ಆಯುಕ್ತ (ಆಡಳಿತಾಧಿಕಾರಿ) ಆಗಿ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸಿಇಓ ಆಗಿದ್ದ ಸಂಗಪ್ಪ ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಿ ಆದೇಶಿಸಿದೆ.
ಮೈಸೂರು ಜಿಲ್ಲಾ ಪೊಲೀಸ್ ಸಿಬ್ಬಂದಿ ವರ್ಗಾವಣೆ ಮಾಹಿತಿ
ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಯೋಗೇಶ್ .ಡಿ ಅವರನ್ನು ಮೈಸೂರು ನಗರ ಸಿದ್ದಾರ್ಥನಗರ ಪೊಲೀಸ್ ಠಾಣೆಗೆ, ಶಿವಮೊಗ್ಗ ಜಿಲ್ಲೆಯ ಕೃಷ್ಣಪ್ಪ ಕೆ.ವಿ ಅವರನ್ನು ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್ ಠಾಣೆಗೆ, ಕೆಜಿಎಫ್ ಕಾಮಸಮುದ್ರ ವೃತ್ತದ ಆನಂದ್ ಕುಮಾರ್ ಜಿ.ಎನ್ ಅವರನ್ನು ಮೈಸೂರು ಜಿಲ್ಲೆಯ ತಲಕಾಡು ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಬ್ಬೀರ್ ಹುಸೇನ್ ಅವರನ್ನು ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣೆಗೆ, ಉದಯಗಿರಿ ಪೊಲೀಸ್ ಠಾಣೆಯ ರಾಜು ಪಿ.ಕೆ.ಅವರನ್ನು ಸಿ.ಇ.ಎನ್ ಪೊಲೀಸ್ ಠಾಣೆಗೆ, ತಲಕಾಡು ಪೊಲೀಸ್ ಠಾಣೆಯ ಅರುಣ್ ಎಲ್ ಅವರನ್ನು ಮೈಸೂರು ನಗರದ ಕುವೆಂಪುನಗರ ಪೊಲೀಸ್ ಠಾಣೆಗೆ, ಮೈಸೂರು ಪಿಟಿಎಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್ಎಸ್ ಮೈಸೂರು ನಗರ ಮಂಡಿ ಪೊಲೀಸ್ ಠಾಣೆಗೆ, ಚನ್ನಪಟ್ಟಣ ಗ್ರಾಮಾಂತರ ವೃತ್ತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಟಿ.ಬಿ ಅವರನ್ನು ಮೈಸೂರು ನಗರ ದೇವರಾಜ ಪೊಲೀಸ್ ಠಾಣೆಗೆ, ದೇವರಾಜ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವಾಕರ್.ಆರ್ ಅವರನ್ನು ಮೇಟಗಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಮೈಸೂರು ಜಿಲ್ಲೆಯ ಸರಗೂರು ವೃತ್ತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆನಂದ ಎನ್ ಅವರನ್ನು ಬೆಂಗಳೂರು ನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ, ಮೈಸೂರಿನ ಕುವೆಂಪುನಗರದಲ್ಲಿ ಕಾರ್ಯಿರ್ವಹಿಸುತ್ತಿದ್ದ ಷಣ್ಮುಗ ವರ್ಮ ಕೆ. ಅವರನ್ನು ಮೈಸೂರಿನ ಪಿಟಿಎಸ್’ಗೆ, ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗದೀಶ್ ಪಿ ಅವರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ, ಮೈಸೂರಿನ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಎಂ.ಆರ್. ಅವರನ್ನು ರಾಜ್ಯ ಗುಪ್ತವಾರ್ತೆಗೆ, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಪ್ಪ ಎನ್.ಜಿ ಅವರನ್ನು ಕೊಡಗು ಜಿಲ್ಲೆ ಸಿಇಎನ್ ಪೊಲೀಸ್ ಠಾಣೆಗೆ, ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಘು ಕೆ.ಆರ್ ಅವರನ್ನು ಮಂಡ್ಯ ಜಿಲ್ಲೆಯ ಡಿಎಸ್’ಬಿ ಗೆ ವರ್ಗಾವಣೆ ಮಾಡಲಾಗಿದೆ.