ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ಮೈಸೂರು-ಕುಶಾಲನಗರ ನಡುವಿನ ರೈಲು ಮಾರ್ಗದ ಕಾಮಗಾರಿಗೆ ಜಮೀನು ಸರ್ವೇ ಮಾಡಲು ಅಧಿಕಾರಿಗಳು ಬರಲಿದ್ದಾರೆ ಎಂಬ ವದಂತಿ ಜಿಲ್ಲೆಯ ಜನರ ನಿದ್ದೆಗೆಡಿಸಿದ್ದು, ಚಿಕ್ಕ ಬೀಚನಹಳ್ಳಿ ಗ್ರಾಮಸ್ಥರು ಸಂಸದ ಪ್ರತಾಪಸಿಂಹನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ಹಾಗೂ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಹುಣಸೂರು ತಾಲೂಕು ಚಿಕ್ಕ ಬೀಚನಹಳ್ಳಿ ಗ್ರಾಮಸ್ಥರು, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರತಾಪ್ ಸಿಂಹ ಅವರು ಬೇರೆ ಕಡೆ ಹೋಗುತ್ತಿದ್ದ ರೈಲ್ವೆ ಮಾರ್ಗವನ್ನು ನಮ್ಮ ಜಮೀನು ಕಡೆ ತಿರುಗಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಅವರು, ಉದ್ಯಮಿಗಳ ಪ್ರಭಾವದ ಒತ್ತಡಕ್ಕೆ ಮಣಿದು, ಮೈಸೂರು ಕುಶಾಲನಗರ ರೈಲು ಮಾರ್ಗವನ್ನು ಎರಡು ಸಲ ಬದಲಾವಣೆ ಮಾಡಿದ್ದಾರೆ. ಈಗ ನಮ್ಮ ಜಮೀನಿನ ಮೇಲೆ ಹಾದು ಹೋಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈಗ ಅರ್ಧ ಎಕರೆ, ಹತ್ತು ಗುಂಟೆ ಜಮೀನು ಇರುವ ನಮ್ಮಂಥ ಬಡ ರೈತರ ಮುಂದಿನ ಜೀವನದ ಪಾಡೇನು?. ಇದ್ದ ಸ್ವಲ್ಪ ಜಮೀನನ್ನು ಕಿತ್ತುಕೊಂಡರೆ, ನಾವೆಲ್ಲ ಎಲ್ಲಿಗೆ ಹೋಗಬೇಕು. ನಾವು ಪ್ರಾಣ ಕೊಟ್ಟೇವು ಆದರೆ ಜಮೀನು ಮಾತ್ರ ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.