ಮನೆ ರಾಷ್ಟ್ರೀಯ ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣ ಎನ್’ಐಎಗೆ ಹಸ್ತಾಂತರ

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣ ಎನ್’ಐಎಗೆ ಹಸ್ತಾಂತರ

0

ಮಂಗಳೂರು(Mangalore) : ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ‌ವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ರಾಷ್ಟ್ರೀಯ ತನಿಖಾ ದಳ (ಎನ್’ಐಎ)ಕ್ಕೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. 

ಈಗಾಗಲೇ ತನಿಖಾ ತಂಡ ಶಂಕಿತ ಉಗ್ರ ಮಹಮ್ಮದ್‌ ಶಾರಿಕ್ ಹೇಳಿಕೆಯ ವಿಡಿಯೋ ರೆಕಾರ್ಡ್ ಮಾಡಿದೆ.  ಇದರ ಜೊತೆಗೆ ಎನ್’ಐಎ ಅಧಿಕಾರಿಗಳು‌‌ ಇಂದಿನಿಂದ ಪ್ರತ್ಯೇಕ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

ಕುಕ್ಕರ್‌ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌’ನನ್ನು ಬುಧವಾರ ಕೂಡ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆ ಯಾಗಿರುವುದು ಗೊತ್ತಾಗಿತ್ತು.

ಡಾರ್ಕ್‌’ವೆಬ್‌ ಮೂಲಕ ಶಾರೀಕ್‌ ಖಾತೆ ತೆರೆದಿದ್ದ. ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ. ಮೈಸೂರಿನಲ್ಲಿ ಹಲವರ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು, ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಎನ್‌’ಐಎ 3 ತಂಡ: ತನಿಖೆ ಕೈಗೆತ್ತಿಕೊಳ್ಳಲು ಎನ್‌’ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿದ್ದು, ಅಧಿಕಾರಿಗಳು ಪ್ರತ್ಯೇಕ ತನಿಖೆ ನಡೆಸಲಿದ್ದಾರೆ.