ಮನೆ ದೇವಸ್ಥಾನ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ದೇವೇಗೌಡ ದಂಪತಿ

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ದೇವೇಗೌಡ ದಂಪತಿ

0

ಮೈಸೂರು(Mysuru): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಚನ್ನಮ್ಮ ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ರುದ್ರಾಭಿಷೇಕ ಮಾಡಿಸಿ,. ತುಲಾಭಾರ ಸೇವೆ ಸಲ್ಲಿಸಿದರು.

ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು.

ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು ಎಂದರು.

ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ ಎಂದು ದೇವೇಗೌಡ ಹೇಳಿದರು.