ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ(Newdelhi): ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್’ಯು) ಕ್ಯಾಂಪಸ್ ಗೋಡೆಗಳಲ್ಲಿ ಕಿಡಿಗೇಡಿಗಳು ಬ್ರಾಹ್ಮಣ ಹಾಗೂ ಬನಿಯಾ ವಿರೋಧಿ ಬರಹಗಳನ್ನು ಬರೆದಿದ್ದಾರೆ.
ಸ್ಕೂಲ್ ಆಫ್ ಇಂಟರ್ನ್ಯಾಷನಲ್ ಸ್ಟಡೀಸ್– 2 ರ ಕಟ್ಟಡದ ವಿಭಾಗದ ತರಗತಿ ಕಟ್ಟಡ ಹಾಗೂ ಪ್ರಾಧ್ಯಾಪಕರ ಕೋಣೆಗಳಲ್ಲಿ ಈ ಬರಹ ಕಂಡು ಬಂದಿದೆ.
ಕೋಣೆಗಳಲ್ಲಿ ಬರಹ ಕಂಡು ಬಂದಿರುವ ಘಟನೆಯನ್ನು ಕುಲಪತಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಿಕಾಯದ ಡೀನ್ ಹಾಗೂ ಕುಂದುಕೊರತೆ ಸಮಿತಿಗೆ ಆದೇಶ ನೀಡಿದ್ದಾರೆ ಎಂದು ಜೆಎನ್’ಯು ಪ್ರಕಟಣೆಯಲ್ಲಿ ತಿಳಿಸಿದೆ.
‘ಬ್ರಾಹ್ಮಣರೇ ಕ್ಯಾಂಪಸ್ ತೊರೆಯಿರಿ‘, ‘ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ‘, ‘ಬ್ರಾಹ್ಮಣರೇ, ಬನಿಯಾಗಳೇ ನಿಮಗಾಗಿ ನಾವು ಬರುತ್ತಿದ್ದೇವೆ, ಸೇಡು ತೀರಿಸಿಕೊಳ್ಳುತ್ತೇವೆ‘ ಎನ್ನುವ ಘೋಷಣೆಗಳನ್ನು ಸ್ಕೂಲ್ ಆಫ್ ಇಂಟರ್ನ್ಯಾಷನಲ್ ಸ್ಟಡೀಸ್’ನ ತರಗತಿ ಕಟ್ಟಡದ ಗೋಡೆಗಳಲ್ಲಿ ಬರೆಯಲಾಗಿದೆ.
‘ಶಾಖೆಗಳಿಗೆ ಮರಳಿ ಹೋಗಿ‘ ಎಂದು ಬ್ರಾಹ್ಮಣ ಪ್ರಾಧ್ಯಾಪಕರು ಇರುವ ಕೊಠಡಿಯಲ್ಲಿ ಬರೆಯಲಾಗಿದೆ.ಎಡ ಪಕ್ಷ ಬೆಂಬಲಿತ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಆರೋಪಿಸಿದೆ.
ಜೆಎನ್’ಯುನ ಪ್ರಾಧ್ಯಾಪಕರ ಸಂಘ ಕೂಡ ಕೃತ್ಯವನ್ನು ವಿರೋಧಿಸಿ ಟ್ವೀಟ್ ಮಾಡಿದೆ.