ಮನೆ ಅಪರಾಧ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸಲು ಕುಮ್ಮಕ್ಕು: ಮತ್ತೊಬ್ಬ ಆರೋಪಿ ಬಂಧನ

ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸಲು ಕುಮ್ಮಕ್ಕು: ಮತ್ತೊಬ್ಬ ಆರೋಪಿ ಬಂಧನ

0

ಚಿತ್ರದುರ್ಗ(Chitradurga): ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವಂತೆ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ.

ಫೋಟೋಗ್ರಾಫರ್ ಮಯೂರ ಬಂಧಿತ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಮೂವರನ್ನು ಬಂಧಿಸಿದ್ದಾರೆ.

ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂಮಠದ ಶಾಲಾ ಶಿಕ್ಷಕ ಬಸವರಾಜೇಂದ್ರ ಬಂಧಿತರಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮತ್ತೊಬ್ಬ ಆರೋಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಲೆಮರೆಸಿಕೊಂಡಿದ್ದಾರೆ.