ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ(Newdelhi): ಭಾರತವು ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವುದು ಮುಕ್ತ, ಸಂಪರ್ಕಿತ, ಸುರಕ್ಷಿತ ಮತ್ತು ಎಲ್ಲರಿಗೂ ಇಂಟರ್ನೆಟ್ ದೊರಕಿಸಿಕೊಡುವ ಮೂಲಕ ಜಾಗತಿಕ ಆರ್ಥಿಕತೆಯನ್ನು ಬಲ ಪಡಿಸಲು ಅದ್ಭುತವಾದ ಅವಕಾಶವಾಗಿದೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.
ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿರುವ ತರಂಜಿತ್ ಸಿಂಗ್ ಸಂಧು ಅವರು ದೇಶದ ಮೂರನೇ ಅತ್ಯುನ್ನತ ನಾಗರಿಕ ಗೌರವವಾಗಿರುವ ‘ಪದ್ಮಭೂಷಣ’ ಪ್ರಶಸ್ತಿಯನ್ನು ಪಿಚೈ ಅವರಿಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಶುಕ್ರವಾರ ನೀಡಿದರು.
ಈ ವೇಳೆ ಮಾತನಾಡಿದ ಪಿಚೈ, ನನ್ನನ್ನು ರೂಪಿಸಿದ ದೇಶವು ಈ ರೀತಿಯಾಗಿ ಗೌರವಿಸುತ್ತಿರುವುದು ನಂಬಲಸಾಧ್ಯವಾದದ್ದು ಎಂದು ಹೇಳಿದ್ದಾರೆ.
ಮುಂದುವರಿದು, ನನ್ನ ಬದುಕಿನ ಭಾಗವಾಗಿರುವ ಭಾರತವನ್ನು, ಎಲ್ಲಿಗೆ ಹೋದರೂ ಕೊಂಡೊಯುತ್ತೇನೆ. ನನ್ನ ಆಸಕ್ತಿಗಳನ್ನು ಅನ್ವೇಷಿಸಲು ಅವಕಾಶಗಳಿವೆ ಎಂದು ಖಚಿತಪಡಿಸಿಕೊಳ್ಳಲು ಬಹಳಷ್ಟು ತ್ಯಾಗ ಮಾಡಿದ ಪೋಷಕರನ್ನು ಪಡೆಯಲು ಹಾಗೂ ಕಲಿಕೆಯನ್ನು ಪ್ರೋತ್ಸಾಹಿಸುವ ಕುಟುಂಬದಲ್ಲಿ ಬೆಳೆಯಲು ಅದೃಷ್ಟ ಮಾಡಿದ್ದೆ ಎಂದು ಹೇಳಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ದೃಷ್ಟಿ ನಿಸ್ಸಂಶಯವಾಗಿ ವೇಗವರ್ಧಕವಾಗಿದೆ. ಪರಿವರ್ತನಾಶೀಲವಾದ ಎರಡು ದಶಕಗಳಿಂದ ಸರ್ಕಾರಗಳು, ಉದ್ಯಮಗಳು ಮತ್ತು ಸಮುದಾಯಗಳ ಪಾಲುದಾರಿಕೆಯೊಂದಿಗೆ ಭಾರತದಲ್ಲಿ ಹೂಡಿಕೆ ಮಾಡುವುದನ್ನು ಗೂಗಲ್ ಮುಂದುವರಿಸಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.